ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವರ್ತೂರು ಸಂತೋಷ್ ಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 2ನೇ ಎಪಿಎಂಎಂ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಇದೀಗ ಮತ್ತೆ ವಾಪಾಸ್ ಬಿಗ್ ಬಾಸ್ ಮನೆಗೆ ಹೋಗ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ವರ್ತೂರು ಸಂತೋಷ್ ಬಿಗ್ ಬಾಸ್ ಸೀಸನ್ 10ರ ಮನೆಯಲ್ಲಿ ಸ್ಪರ್ಧಿಯಾಗಿದ್ದಾರೆ. ರೈತನಾಗಿ ಬಂದಿರುವ ವರ್ತೂರು ಸಂತೋಷ್, ಮೈತುಂಬಾ ಒಡವೆ ಹಾಕಿದ್ದರು. ಇದರಲ್ಲಿ ಹುಲಿ ಉಗುರು ಇರುವಂತ ಪೆಂಡೆಂಟ್ ಹಾಕಿದ್ದರು. ಇದನ್ನು ಗಮನಿಸಿದ್ದ ಅರಣ್ಯಾಧಿಕಾರಿಗಳು ಬಂಧಿಸಿದ್ದರು.
ಇಂದು ಜಾಮೀನು ಸಿಕ್ಕಿದೆ. ಮಾಹಿತಿಗಳ ಪ್ರಕಾರ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಗೆ ಹೋಗಲಿದ್ದಾರೆ. ಈಗಾಗಲೇ ಪೊಲೀಸ್ ಠಾಣೆಯ ಬಳಿಯೆ ಬಿಗ್ ಬಾಸ್ ವಾಹನ ಹೋಗಿದೆ ಎನ್ನಲಾಗಿದೆ. ನೂರು ದಿನಗಳ ಆಟದಲ್ಲಿ ವರ್ತೂರು ಸಂತೋಷ್ ಮತ್ತೆ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಬಿಗ್ ಬಾಸ್ ಗೆ ಹೋದರೆ ನಾಳೆಯ ಎಪಿಸೋಡ್ ನಲ್ಲಿ ವರ್ತೂರು ಸಂತೋಷ್ ಕಾಣಿಸಿಕೊಳ್ಳಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










