Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ದ ಭಜರಂಗದಳ ಗರಂ : ಕಾರಣವೇನು ಗೊತ್ತಾ..?

Facebook
Twitter
Telegram
WhatsApp

 

 

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಂಗಳೂರಿನ ಘಟನೆಯೊಂದರ ಬಗ್ಗೆ ಮಾತನಾಡಿದ್ದರು. ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂಧರ್ಭದಲ್ಲಿ ಎಷ್ಟೇ ಒತ್ತಡವಿದ್ದರು, ಮುಲಾಜಿಲ್ಲದೆ ಒದ್ದು ಒಳಗೆ ಹಾಕಿದ್ದೆ ಎಂಬುದಾಗಿ ಹೇಳಿದ್ದರು. ಈ ವಿಚಾರವಾಗಿ ಭಜರಂಗದಳ ಆಕ್ರೋಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಭಜರಂಗದಳದ ಸಹ ಸಂಯೋಜಕ ಪುನೀತ್ ಅತ್ತಾವರ್ ಆಕ್ರೋಶ ಹೊರ ಹಾಕಿದ್ದಾರೆ.

 

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..! ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

 

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ. ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಪುನೀತ್ ಅತ್ತಾವರ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!