ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ನಗರದ ಹೊರವಲಯದ ತಮಟಗಲ್ಲು ರಸ್ತೆಯಲ್ಲಿರುವ ತರಳಬಾಳು ನಗರದ ಕಡ್ಲೆಬಟ್ಟಿ ಬಳಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಂಯೋಜಕರಾದ ಪ್ರಭಂಜನ್ ಗ್ರಾಮಾಂತರ ಕಾರ್ಯದರ್ಶಿ ಡೈರಿ ಶ್ರೀನಿವಾಸ್ ಹಾಗೂ ಜಿಲ್ಲಾ ಕಾರ್ಯದರ್ಶಿ ಕೇಶವ್ ಉದ್ಘಾಟಿಸಿದರು.
ಈ ತಪಾಸಣೆಯ ಪ್ರಮುಖರಾದ ಡಾ. ಯಶಸ್ ಮತ್ತು ತಂಡ ಡಾ. ಶೋಭಾ ಮತ್ತು ಆಯುರ್ವೇದಿಕ್ ಡಾ. ಪ್ರಶಾಂತ್ ಮತ್ತು ತಂಡ ಉಪಸ್ಥಿತಿ ಇದ್ದರು. ಈ ಆರೋಗ್ಯ ತಪಾಸಣೆಯಲ್ಲಿ 100ಕ್ಕೂ ಹೆಚ್ಚು ರೋಗಿಗಳಿಗೆ ತಪಾಸಣೆ ಮಾಡಿ ಔಷಧಿಗಳನ್ನು ಉಚಿತವಾಗಿನೀಡಿದರು.
ಈ ಆರೋಗ್ಯ ತಪಾಸಣೆಯಲ್ಲಿ ಸಾಮಾನ್ಯ ಚಿಕಿತ್ಸೆ, ಹೃದಯ ಸಂಬಂಧಿತ ಚಿಕಿತ್ಸೆ ( ECG ವ್ಯವಸ್ಥೆ), ಚರ್ಮರೋಗ ಚಿಕಿತ್ಸೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಸಹ ಸಂಚಾಲಕ ದರ್ಶನ್, ವಿದ್ಯಾರ್ಥಿ ಪ್ರಮುಖರಾದ ತೇಜಸ್, ದಿನೇಶ, ಕಾರ್ಯಕರ್ತರದ ಮಹೇಶ್, ಶ್ರೀನಿವಾಸ್, ಟ್ರ್ಯಾಕ್ಟರ್ ಶಿವಣ್ಣ ವಿಜಿಯಣ್ಣ, ನಗರ ಅಧ್ಯಕ್ಷರು ಅಶೋಕ್, ಜಿಲ್ಲಾ ಕಾರ್ಯ ಕಾರಣಿ ಸದಸ್ಯರ ವಿಠ್ಠಲ್, ನಗರ ಸೇವಾ ಪ್ರಮುಖವಾದ ರಘು, ಬಸವರಾಜ್, ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











