Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ರೊಚ್ಚುಗೆದ್ದ ಬಲಿಜಾ ಸಮುದಾಯ : ಕಾರಣವೇನು ಗೊತ್ತಾ..?

---Advertisement---

 

ಬೆಂಗಳೂರು: ಕೋಟಿ ಕೋಟಿ ವಂಚನೆ ಆರೋಪ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮೇಲೆ ಬಂದಿದೆ. ಈ ಕಾರಣಕ್ಕೆ ಬಲಿಜ ಸಮುದಾಯದವರು ತಿರುಗಿ ಬಿದ್ದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಬೋಗಸ್ ದಾಖಲೆ, ಅಕ್ರಮವಾಗಿ ಟ್ರಸ್ಟ್ ಗೆ ಸೇರಿದ ಜಾಗವನ್ನು ಕಬಳಿಸುವ ಹುನ್ನಾರ ಮಾಡಿದ್ದು, ಈ ಮೂಲಕ ಕೋಟಿ ಕೋಟಿ ರೂಪಾಯಿ ವಂಚನೆ ಆರೋಪದಲ್ಲಿ ಬಲಿಜ ಸಮುದಾಯದ ಕೋಪಕ್ಕೆ ಗುರಿಯಾಗಿದ್ದಾರೆ. ಸಂಸದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಆನೇಕಲ್ ತಿಮ್ಮಯ್ಯ ಚಾರಿಟಬಲ್ ಟ್ರಸ್ಟ್ ನ ದತ್ತಿ ಸಂಸ್ಥೆಗೆ ಸೇರಿದ್ದ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎನ್ನಲಾಗಿದೆ. ಎಂ ಎಸ್ ರಾಮಯ್ಯ ವಿದ್ಯಾ ಸಮೂಹ ಸಂಸ್ಥೆಗಳ ಛೇರ್ಮನ್ ಎಂ.ಆರ್.ಜಯರಾಂ ಅವರ ನೇತೃತ್ವದಲ್ಲಿ ತಿಮ್ಮಯ್ಯ ಚಾರಿಟಬಲ್ ಟ್ರಸ್ಟ್ ಮುಂಭಾಗ ಪ್ರತಿಭಟನೆ ಮಾಡಲಾಗಿದೆ. ಕಪ್ಪು ಪಟ್ಟಿ ಧರಿಸಿ ಶಿವರಾಮೇಗೌಡರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಶಿವರಾಮೇಗೌಡ ತೊಲಗು ಎಂಬ ಭಿತ್ತಿ ಪತ್ರಗಳನ್ನು ಹಂಚಿದ್ದಾರೆ. ರಾಜ್ಯದ ಮೂಲೆ‌ಮೂಲೆಯಿಂದಲೂ ಆಗಮಿಸಿ ಪ್ರತಿಭಟನೆಯಲ್ಲಿ ಜನ ಭಾಗವಹಿಸಿದ್ದರು. ಯಾವುದೇ ಕಾರಣಕ್ಕೂ ಸಮುದಾಯದ ಜಾಗವನ್ನು ಬಿಟ್ಟುಕೊಡುವುದಿಲ್ಲ. ಮುಂದೆ ಯಾವುದೇ ರೀತಿಯ ಹೋರಾಟಕ್ಕೂ ನಾವೆಲ್ಲ ಸಿದ್ಧರಿದ್ದೇವೆ. ಸಮುದಾಯದ ಮುಂಚೂಣಿ ನಾಯಕರಿಗೆ ಸಹಕಾರ ನೀಡುತ್ತೇವೆ ಎಂದಿದ್ದಾರೆ.

ಇನ್ನು ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಕೆಂಚಣ್ಣ ಶ್ರೀನಿವಾಸನ್ ಹೇಳುವ ಪ್ರಕಾರ, ಮಾಜಿ ಸಂಸದ ಶಿವರಾಮೇಗೌಡ, ಆತನ ಗೂಂಡಾಗಳು, ಸಹಚರರು, ಬೌನ್ಸರ್ ಗಳು, ಗನ್ ಮ್ಯಾನ್ ಗಳು ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ಖಾಲಿ ಜಾಗವನ್ನು ಆಕ್ರಮಿಸಲು ಯತ್ನಿಸುತ್ತಿದ್ದಾರೆ. ಕಾನೂನು ಪ್ರಕಾರವೇ ಹೋರಾಟ‌ನಡೆಸುತ್ತಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment