Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವ ನಿಷೇಧ : ಯಾಕೆ ಗೊತ್ತಾ ? ಜಿಲ್ಲಾಧಿಕಾರಿ ಆದೇಶದಲ್ಲೇನಿದೆ ?

---Advertisement---

ಬಳ್ಳಾರಿ,ಏ.01 :‌ ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.


ಕೊಳಗಲ್ಲು ಗ್ರಾಮದಲ್ಲಿ ಶ್ರೀ ಸದ್ಗುರು ಎರ‍್ರಿತಾತನವರ ದೇವಸ್ಥಾನದ ಆಸ್ತಿ-ಪಾಸ್ತಿ ಮತ್ತು ಆಡಳಿತ ವಿಚಾರವಾಗಿ ಗಲಾಟೆಗಳಾಗಿ ವಿವಾದ ಇರುತ್ತದೆ ಹಾಗೂ 2024 ರ ಫೆ.24 ರಂದು ಬೆಳಿಗ್ಗೆ 04 ಗಂಟೆಗೆ ಶ್ರೀ ಸದ್ಗುರು ಎರ‍್ರಿತಾತನವರ ಮಠದ ಆವರಣದಲ್ಲಿ ಹೊಸದಾಗಿ ಕಟ್ಟಿರುವ ಎರಿಯಪ್ಪ ತಾತ ಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವಿಚಾರವಾಗಿ ಧಾರವಾಡ ಉಚ್ಛ ನ್ಯಾಯಾಲಯ ಪೀಠವು ಪ್ರತಿಷ್ಠಾಪಿಸಿದ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಆದೇಶಿಸಿರುತ್ತಾರೆ.

 

ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮೂರ್ತಿ ತೆರವುಗೊಳಿಸಿರುವುದರಿಂದ ಕೊಳಗಲ್ ಗ್ರಾಮದಲ್ಲಿ ಪರ-ವಿರೋಧ ಇರುವ ವಿವಿಧ ಜಾತಿ ಜನಾಂಗದವರ ಮಧ್ಯೆ ವೈಷಮ್ಯ ಉಂಟಾಗಿ 2024 ರ ಏ.07 ರಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದು ಮತ್ತು ದೇವಸ್ಥಾನದ ಆಸ್ತಿ-ಪಾಸ್ತಿ ಹಾಗೂ ಆಡಳಿತದ ವಿಚಾರವಾಗಿ ಗಲಾಟೆಗಳಾಗಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.

ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವು ಆಚರಣೆ ಮಾಡಿದಲ್ಲಿ ಸಾರ್ವಜನಿಕರಿಗೆ ಪ್ರಾಣ ಹಾನಿ, ಆಸ್ತಿ-ಪಾಸ್ತಿ ನಷ್ಟ ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಕೊಳಗಲ್ ಗ್ರಾಮದಲ್ಲಿ ಇದೇ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ಆಚರಣೆ ಮಾಡದಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಂತೆ ನಿಷೇಧಿಸಿ ಆದೇಶ ಹೊರಡಿಸಲು ಕೋರಿರುತ್ತಾರೆ.
ಅದರಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಾ.28 ರಂದು ನಡೆದ  ಸಭೆಯ ನಡವಳಿಗಳಲ್ಲಿ ಜಾತ್ರೆ ಆಚರಿಸಲು ಅನುಮತಿ ನೀಡಿದಲ್ಲಿ ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಿಳಿಸಿರುತ್ತಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಸಹ ಕೊಳಗಲ್ ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಾತ್ರೆ/ರಥೋತ್ಸವ ಆಚರಣೆ ಮಾಡದಂತೆ ನಿಷೇಧಿಸುವುದು ಸೂಕ್ತ ಎಂದು ತಿಳಿಸಿರುತ್ತಾರೆ.

ಹಾಗಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೊಳಗಲ್ ಗ್ರಾಮದಲ್ಲಿ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ನಿಷೇಧಿಸಿ ಆದೇಶಿಸಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...