Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಮತ್ತೆ ಮತ್ತೆ ಬಂದ್ : ಈ ಬಾರಿ ಕರ್ನಾಟಕವಲ್ಲ ತಮಿಳುನಾಡಿನಿಂದ ಬಂದ್..!

Facebook
Twitter
Telegram
WhatsApp

ಬೆಂಗಳೂರು : ಕಾವೇರಿ ಹೋರಾಟ ಮುಗಿಯುವಂತೆ ಕಾಣುತ್ತಿಲ್ಲ. ಇತ್ತ ರಾಜ್ಯದಲ್ಲಿ ಮಳೆಯಿಲ್ಲ. ಸಮಯಕ್ಕೆ ಸರಿಯಾಗ ರಾಜ್ಯದಲ್ಲಿ ಮಳೆಯಾಗಿದ್ದರೆ ಕಾವೇರಿ ನೀರು ತಮಿಳುನಾಡಿಗೆ ಸಲೀಸಾಗಿ ಹರಿಯುತ್ತಿತ್ತು. ಆದರೆ ಮಳೆ ಇಲ್ಲದೆ ರೈತರು ಮೊದಲೇ ಕಂಗಲಾಗಿದ್ದಾರೆ. ಇದರ ನಡುವೆ ತಮಿಳುನಾಡು ರೈತರು ನೀರು ಬಿಡಲೇಬೇಕೆಂದು ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ.

ಕಾವೇರಿ ಕೊಳ್ಳದಲ್ಲಿ ನೀರು ಖಾಲಿಯಾಗುತ್ತಿದೆ. ರಾಜ್ಯದಲ್ಲಿ ಬರದ ಸ್ಥಿತಿ ಎಂಬುದನ್ನು ಕರ್ನಾಟಕ ಸರ್ಕಾರ ತಿಳಿಸುವ ಪ್ರಯತ್ನ ಮಾಡಿದರು, ಕಾವೇರಿ ಪ್ರಾಧಿಕಾರ ಅದನ್ನು ಅರ್ಥ ಮಾಡಿಕೊಳ್ಳದೆ, ತಮಿಳುನಾಡಿನ ಪರವೇ ತೀರ್ಪು ನೀಡುತ್ತಿದೆ. ಇದಕ್ಕೆ ರೊಚ್ಚುಗೆದ್ದ ಕರ್ನಾಟಕ ರೈತರು ಎರಡು ಬಾರಿ ಬಂದ್ ಮಾಡಿದ್ದಾರೆ. ಒಮ್ಮೆ ಬೆಂಗಳೂರು ಬಂದ್ ಇನ್ನೊಮ್ಮೆ ಕರ್ನಾಟಕ ಬಂದ್. ಆದ್ರೆ ಕಾವೇರಿಗಾಗಿ ಇನ್ನೊಮ್ಮೆ ಬಂದ್ ನಡೆಯಲಿದೆ. ಅದು ತಮಿಳುನಾಡು ರೈತರಿಂದ.

ಹೌದು ಅಕ್ಟೋಬರ್ 11 ರಂದು ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ಮಾಡುವುದಕ್ಕೆ ಸಿದ್ಧವಾಗಿದ್ದಾರೆ. ಕಾವೇರಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಆದೇಶವಿದ್ದರು ಕರ್ನಾಟಕ ನೀರು ಬಿಡುತ್ತಿಲ್ಲ ಎಂದೇ ತಮಿಳುನಾಡು ಆಕ್ರೋಶ ವ್ಯಕ್ತಪಡಿಸಿದೆ. ಕಾವೇರಿ ನೀರನ್ನು ಆದೇಶದಂತೆ ಬಿಡಿಸಬೇಕು ಎಂದು ಬಂದ್ ಗೆ ಕರೆ ನೀಡಿವೆ. ಬಂದ್ ನ ದಿನದಂದು ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!