ಬಂದೋಬಸ್ತ್ ಮಾಡಬೇಕು.. ಇಲ್ಲಂದ್ರೆ ಮತ್ತೊಂದು ಗೋದ್ರಾ ನಡೆಯುತ್ತೆ : ಬಿಕೆ ಹರಿಪ್ರಸಾದ್

ಬೆಂಗಳೂರು: ರಾಮ ಮಂದಿರ.. ಅಯೋಧ್ಯ.. ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸವಿದೆ. ರಾಮಮಂದಿರ ಕಟ್ಟಿರುವುದು, ನಾನು ಒಬ್ಬ ಹಿಂದೂವಾಗಿ ಹೇಳುವುದು, ಯಾವುದೋ ಧಾರ್ಮಿಕ ಗುರುಗಳು ಬಂದು ರಾಮಮಂದಿರವನ್ನು ಉದ್ಘಾಟನೆ ಮಾಡುತ್ತಿದ್ದಾರೆ ಎಂದರೆ ನಾವ್ಯಾರು ಕೂಡ ನಿಯಂತ್ರ, ಆಮಂತ್ರಣವನ್ನು ಕಾಯುತ್ತಾ ಕುಳಿತಿರುತ್ತಿರಲಿಲ್ಲ. ನಾವೆಲ್ಲಾ ಹೋಗುತ್ತಾ ಇದ್ದೆವುಮ ಆದರೆ ಇದನ್ನು ಮಾಡುತ್ತಾ ಇರುವುದು ವಿಶ್ವ ಗುರು. ವಿಶ್ವಗುರು ಯಾವ ಧರ್ಮಕ್ಕೆ ಸೇರಿದ್ದಾರೆ ಎಂಬುದು ಇನ್ನು ಗೊತ್ತಿಲ್ಲ. ಅಮಿತ್ ಶಾ ಯಾವ ಧರ್ಮಕ್ಕೆ ಸೇರಿದ್ದಾರೆ ಎಂಬುದು ಗೊತ್ತಿಲ್ಲ. ಇದೇನು ರಾಜಕೀಯ ಕಾರ್ಯಕ್ರಮವಾ..? ಎಂದು ಪ್ರಶ್ನಿಸಿದ್ದಾರೆ.

 

ಇದು ನನ್ನ ವೈಯಕ್ತಿಕವಾದ ಅಭಿಪ್ರಾಯ. ಪಕ್ಷಕ್ಕೂ ಈ ಹೇಳಿಕೆಗೂ ಸಂಬಂಧವಿಲ್ಲ. ಆದರೆ ಇದು ಧಾರ್ಮಿಕ ಕಾರ್ಯಕ್ರಮ ಅಲ್ಲ, ರಾಜಕೀಯ ಕಾರ್ಯಕ್ರಮ. ಇದನ್ನು ರಾಜಕೀಯವಾಗಿಯೇ ನೋಡಬೇಕಾಗುತ್ತದೆ. ನನಗೆ ತಿಳಿದಿರುವ ಪ್ರಕಾರ ಹಿಂದೂ ಧರ್ಮದ ಮುಖ್ಯಸ್ಥರು ಎಂದು ಹೇಳಿದರೆ ಅದು ಶಂಕರಾಚಾರ್ಯರು. ನಮ್ಮ ಹಿಂದೂ ಧರ್ಮದ ಯಾವುದೇ ಗುರುಗಳು ಹೋಗಿ ಉದ್ಘಾಟನೆಯನ್ನು ಮಾಡಿದರು ಸಹ ಹೋಗುತ್ತೇವೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಯಾವುದೇ ಗುರುಗಳಲ್ಲ ಹೀಗಾಗಿ ಆ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.

 

ಪೂಜಾ ಸ್ಥಳವನ್ನು ಧ್ವಂಸ ಮಾಡಿ, ಇನ್ನೊಂದನ್ನು ಕಟ್ಟುವಂತದ್ದು ಯಾವುದೇ ಇತಿಹಾಸದಲ್ಲೂ ಇಲ್ಲ. ಬಹಳ ಸ್ಪಷ್ಟವಾಗಿ ಹೇಳುತ್ತೀ‌ನಿ ಇದು ಧಾರ್ಮಿಕ ಕಾರ್ಯಕ್ರಮ ಅಲ್ಲ. ಕರ್ನಾಟಕ ರಾಜ್ಯದಲ್ಲಿ ಎಲ್ಲಾ ರೀತಿಯ ಕಟ್ಟೆಚ್ಚರವನ್ನು ವಹಿಸಿಕೊಳ್ಳಬೇಕಾಗುತ್ತದೆ‌. ಗುಜರಾತ್ ನಲ್ಲಿ ಇದೇ ಸಮಯದಲ್ಲಿ ಕರಸೇವಕರ ಹತ್ಯೆ ನಡೆದಿತ್ತು. ಅದೇ ರೀತಿ ಒಂದು ಸೃಷ್ಟಿ ಮಾಡುವುದಕ್ಕೆ ಪದರಯತ್ನ ಮಾಡುತ್ತಾರೆ. ಕರ್ನಾಟಕದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವುದಕ್ಕೆ ಅವಕಾಶ ಕೊಡಬಾರದು. ಯಾರ್ಯಾರು ಅಯೋಧ್ಯೆಗೆ ಹೋಗುತ್ತಾರೆ ಅವರೆಲ್ಲರಿಗೂ ಹೋಗುವುದಕ್ಕೆ ಬಂದೋ ಬಸ್ತ್ ಮಾಡಿಕೊಡಬೇಕಾಗುತ್ತದೆ. ಇಲ್ಲ ಅಂದರೆ ಕರ್ನಾಟಕದಲ್ಲಿ ಮತ್ತೊಂದು ಗೋಧ್ರಾ ನೋಡಲಿಕ್ಕೆ ಆಗಲ್ಲ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago