Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಗಾರಕ್ಕನಹಳ್ಳಿ: ಡಿ.26 ರಿಂದ 29 ರವರೆಗೆ ಶೃಂಗೇಶ್ವರ ಸ್ವಾಮಿಯ ಕಾರ್ತಿಕ ಮಹೋತ್ಸವ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ತಾಲ್ಲೂಕಿನ ತುರುವನೂರು ಹೋಬಳಿ ಬಂಗಾರಕ್ಕನಹಳ್ಳಿ ಗ್ರಾಮದಲ್ಲಿ ಇದೇ ಡಿ.26 ರಿಂದ 29 ರವರೆಗೆ ಶೃಂಗೇಶ್ವರ ಸ್ವಾಮಿ (ನಂದೀಶ್ವರ  ಸ್ವಾಮಿ) ಯ ಕಾರ್ತಿಕ ಮಹೋತ್ಸವ ಮತ್ತು ಗ್ರಾಮದ ಎಲ್ಲಾ ದೇವರುಗಳ ಪೂಜಾ ಕಾರ್ಯಕ್ರಮ ನಡೆಯಲಿದೆ.

ಡಿ.26ರಂದು ಸಂಜೆ 7ಕ್ಕೆ ಸ್ವಾಮೀಜಿಯವರ ಗದ್ದಿಗೆ ದೀಪೋತ್ಸವ, ಡಿ.27ರಂದು ಬೆಳಿಗ್ಗೆ ಗಂಗೆ ಪೂಜೆ, ಸಂಜೆ ಅಭಿಷೇಕ, ಡಿ.28ರಂದು ಗುಡ್ಡದ ಶೃಂಗೇಶ್ವರ ಸ್ವಾಮಿಯ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಮೆರವಣಿಗೆ ಮತ್ತು ಸಂಜೆ ಕಾರ್ತಿಕ ಮಹೋತ್ಸವ  ಹಾಗೂ ಗ್ರಾಮದ ಎಲ್ಲಾ ದೇವರುಗಳ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ ಭಜನೆ ಕಾರ್ಯಕ್ರಮ ನಡೆಯಲಿದೆ. ಡಿ.29ರಂದು ಗುಡ್ಡದ ಶೃಂಗೇಶ್ವರ ಸ್ವಾಮಿಯ ಮಹಾ ಮಂಗಳಾರತಿ ಮತ್ತು ಅನ್ನಸಂತರ್ಪಣೆ (ದಾಸೋಹ) ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಬಂಗಾರಕ್ಕನಹಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...