ಡಿಕೆಶಿ ಮೇಲೆ ಸಾಫ್ಟ್ ಕಾರ್ನರ್.. ಸಿದ್ದರಾಮಯ್ಯ ಭೇಟಿ ಮಾಡಿದ ಬಂಗಾರಪ್ಪ ಪುತ್ರರು..!

suddionenews
1 Min Read

ಬೆಂಗಳೂರು: ಇಂದು ದಿವಂಗತ ಬಂಗಾರಪ್ಪ ಅವರ ಪುತ್ರರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ ಅರ್ಧ ಗಂಟೆಗೂ ಅಧಿಕ ಕಾಲ ಮಾತನಾಡಿದ್ದಾರೆ.

ಮಧು ಬಂಗಾರಪ್ಪ ಹಾಗೂ ಕುಮಾರ್ ಬಂಗಾರಪ್ಪ ಇಬ್ಬರು ಕೂಡ ಸಿದ್ದರಾಮಯ್ಯ ಅವರನ್ನ ಶಿವಾನಂದ್ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಅಣ್ಣ-ತಮ್ಮಂದಿರು ಒಟ್ಟಿಗೆ ಬಂದಿಲ್ಲ.. ಬದಲಾಗಿ ಮಧು ಬಂಗಾರಪ್ಪ ಬಂದೋದ ಬಳಿಕ ಕುಮಾರ ಬಂಗಾರಪ್ಪ ಬಂದಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿರೋ, ಕುಮಾರ್ ಬಂಗಾರಪ್ಪ, ನನ್ನ ಮಗಳ ಮದುವೆ ನವೆಂಬರ್ 10ಕ್ಕೆ ಇದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ಕೊಡಲು ಬಂದಿದ್ದೆ. ಈ ವೇಳೆ ನನ್ನ ತಮ್ಮ ಇದ್ದ ನೋಡಿ ಸಂತೋಷ ಆಯ್ತು. ನಾವು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನನ್ನ ಮಗಳ ಮದುವೆಗೆ ಆಹ್ವಾನ ನೀಡಲು ಬಂದಿದ್ದೆ ಅಷ್ಟೆ.

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ. ಕಾಂಗ್ರೆಸ್ ಸೇರ್ತಾರೆ ಅನ್ನೋದು ಸುಳ್ಳು ಸುದ್ದಿ. ನನ್ನನ್ನು ಯಾವ ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿಲ್ಲ, ನಾನು ಕಾಂಗ್ರೆಸ್ ಸೇರಲ್ಲ. ನಾನು ಬಿಜೆಪಿಯಲ್ಲಿ ಇರುತ್ತೇನೆ. ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತೀನಿ ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್ ಸೇರ್ತೀನಿ ಅನ್ನೋದು ಸತ್ಯಕ್ಕೆ ದೂರವಾರ ಮಾತು ಎಂದು ಸ್ಪಷ್ಟಪಡಿಸಿದರು

Share This Article
Leave a Comment

Leave a Reply

Your email address will not be published. Required fields are marked *