Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾನು ಮುಷ್ತಾಕ್ ಅವರಿಂದಲೇ ದಸರಾ ಉದ್ಘಾಟನೆ : ಸಚಿವ ರಾಮಲಿಂಗಾ ರೆಡ್ಡಿ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 30 : ಈಗಾಗಲೇ ಬಿಜೆಪಿ ನಾಯಕರು ಸೇರಿದಂತೆ ಹಲವರಿಂದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಬೇಡ ಎಂಬ ಮಾತುಗಳೇ ಕೇಳಿ ಬರುತ್ತಿವೆ. ಅಲ್ಲದೆ ಅವರೇ ಬೇಕು ಅನ್ನೋದಾದ್ರೆ ಬಾನು ಮುಷ್ತಾಕ್ ಅವರು ಒಂದಷ್ಟು ಬದಲಾವಣೆ ಮಾಡಿಕೊಳ್ಳಬೇಕು. ಕುಂಕುಮ ಇಟ್ಟುಕೊಂಡು ಬರಲಿ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿದೆ. ಇದರ ನಡುವೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ದಸರಾವನ್ನು ಬಾನು ಮುಷ್ತಾಕ ಅವರೇ ಉದ್ಘಾಟನೆ ಮಾಡಲಿದ್ದಾರೆ ಎಂಬ ಮಾತನ್ನು ಹೇಳಿದ್ದಾರೆ.

 

ಹಿರಿಯೂರಲ್ಲಿ ಮಾತನಾಡಿದ ರಾಮಲಿಂಗರೆಡ್ಡಿ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ಅಪಪ್ರಚಾರ ಮಾಡಲಾಗುತ್ತಿದೆ. ಚಾಮುಂಡಿ ದೇಗುಲ ಮುಜರಾಯಿ ಇಲಾಖೆಗೆ ಸೇರಿದೆ. ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ಅವರಿಗೆ ನಿದ್ದೆ ಬರಲ್ಲ.

ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದೋ, ಅಲ್ಲವೋ ಎಂಬುದು ಕೋರ್ಟ್ ತೀರ್ಮಾನಿಸುತ್ತದೆ. ನಾಡಹಬ್ಬ ಏಳು ಕೋಟಿ ಜನರಿಗೆ ಸೇರಿರುವಂಥ ಹಬ್ಬ. ಬಿಎಸ್ವೈ ಕಾಲದಲ್ಲಿ ಅಬ್ದುಲ್ ಕಲಾಂಗೆ ಅಹ್ವಾನಿಸಿದ್ದರು. ಈ ಹಿಂದೆ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿಗರು ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ದರಾ? ಅವರವರ ಧರ್ಮ ಅವರವರಿಗೆ ಶ್ರೇಷ್ಠ. ಯಾವುದೇ ಧರ್ಮವನ್ನು ಯಾರೂ ದ್ವೇಷಿಸಬಾರದು. ಮತಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಗರಿಗೆ ಜನ ನೆಮ್ಮದಿಯಿಂದ ಇರುವುದು ಬೇಕಾಗಿಲ್ಲ. ಬಿಜೆಪಿಯಿಂದ ಬೆಂಕಿ ಹಚ್ಚಿ ಬೇಳೆ ಕಾಳು ಬೇಯಿಸಿಕೊಳ್ಳುವ ಕೆಲಸ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಲ್ಲ. ಸಿಎಂ, ಡಿಸಿಎಂ ಈಗಾಗಲೇ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment