Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂ.1ರಿಂದ 6ರವರೆಗೆ ಬಾರ್ ಬಂದ್, ಎಣ್ಣೆ ಸಿಗಲ್ಲ..!

---Advertisement---

ಬೆಂಗಳೂರು: ಮದ್ಯಪಾನ ಪ್ರಿಯರು ದಿನದಿಂದ ದಿಕ್ಕೆ ಹೆಚ್ಚಾಗುತ್ತಲೆ ಇದ್ದಾರೆ. ಇತ್ತಿಚೆಗೆ ಮದ್ಯಪಾನ ಸೇವನೆ ಅನ್ನೋದು ಕ್ರೇಜ್ ಆಗಿ ಬಿಟ್ಟಿದೆ. ಕೊರೊನಾ ಸಮಯದಲ್ಲಿ ಮದ್ಯಪಾನ ಸಿಗಲ್ಲ ಎಂದಾಗಲೇ ಮಾರುದ್ದ ಕ್ಯೂ ನಿಂತು ತೆಗೆದುಕೊಂಡು ಹೋಗಿದ್ದರು. ಇದೀಗ ಜೂನ್ 1ರಿಂದ ಮದ್ಯಪಾನ ಸಿಗಲ್ಲ ಎಂದು ಹೇಳಲಾಗುತ್ತಿದೆ. ಅದು ಆರು ದಿನಗಳ ಕಾಲ ಮದ್ಯಪಾನ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಎಲ್ಲಾ ಬಾರ್ ಗಳು ಬಂದ್ ಆಗಲಿವೆ.

ಎಂಎಲ್ಸಿ ಚುನಾವಣೆ ಇರುವ ಕಾರಣ ಹಾಗೇ ಜೂನ್ 4ರಂದು ಬಹಳ ಮುಖ್ಯವಾಗಿ ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವ ಕಾರಣ ಎಣ್ಣೆ ಮಾರಾಟ ಇರುವುದಿಲ್ಲ. ಜೂನ್ 3ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಜೂನ್ 4ರಂದು ಲೋಕಸಭೆ ಚುನಾಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 6ರಂದು ಎಂಎಲ್ಸಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಈ ಎಲ್ಲಾ ದಿನಗಳಲ್ಲೂ ಮದ್ಯದಂಗಡಿಯ ಬಾಗಿಲು ಮುಚ್ಚಿರುತ್ತದೆ. ಮದ್ಯಪ್ರಿಯರು ಜೂನ್ 1ರ ಒಳಗೆ ಎಷ್ಟು ಆಗುತ್ತೋ ಅಷ್ಟು ಎಣ್ಣೆ ಶೇಖರಿಸಿಟ್ಟುಕೊಳ್ಳಬಹುದು.

ಈ ಬಾರಿಯ ಲೋಕಸಭಾ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಬಾರಿಸುವ ಮೂಲಕ ಮತ್ತೆ ಪ್ರಧಾನಿ ಪಟ್ಟ ಅಲಂಕರಿಸುತ್ತಾರಾ..? ಬಿಜೆಪಿಯನ್ನು ಸೋಲಿಸಲೆ ಎಂದೆ ಇಂಡಿಯಾ ಕೂಟ ಒಂದಾಗಿದೆ. ಆ ಪಕ್ಷವೇನಾದರೂ ಗೆಲ್ಲಲಿದೆಯಾ ಎಂಬೆಲ್ಲಾ ಪ್ರಶ್ನೆಗಳು ಜನರನ್ನು ಕಾಡುತ್ತಿದೆ. ಈ ಬಾರಿ ಮತದಾರ ಯಾರ ಕೈಹಿಡಿದಿದ್ದಾನೆ ಎಂಬುದು ಜೂನ್ 4ರಂದು ಬಹಿರಂಗವಾಗಲಿದೆ. ಆ ದಿನ ಕೂಡ ಸಮೀಪಿಸುತ್ತಿದೆ. ದೇಶದ ಕೆಲವೆಡೆ ಇನ್ನು ಮತದಾನ ನಡೆಯುತ್ತದೆ ಇದೆ. ಜೂನ್ 4ಕ್ಕೆ ಫಲಿತಾಂಶ ಹೊರ ಬರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment