Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂ.1ರಿಂದ 6ರವರೆಗೆ ಬಾರ್ ಬಂದ್, ಎಣ್ಣೆ ಸಿಗಲ್ಲ..!

Facebook
Twitter
Telegram
WhatsApp

ಬೆಂಗಳೂರು: ಮದ್ಯಪಾನ ಪ್ರಿಯರು ದಿನದಿಂದ ದಿಕ್ಕೆ ಹೆಚ್ಚಾಗುತ್ತಲೆ ಇದ್ದಾರೆ. ಇತ್ತಿಚೆಗೆ ಮದ್ಯಪಾನ ಸೇವನೆ ಅನ್ನೋದು ಕ್ರೇಜ್ ಆಗಿ ಬಿಟ್ಟಿದೆ. ಕೊರೊನಾ ಸಮಯದಲ್ಲಿ ಮದ್ಯಪಾನ ಸಿಗಲ್ಲ ಎಂದಾಗಲೇ ಮಾರುದ್ದ ಕ್ಯೂ ನಿಂತು ತೆಗೆದುಕೊಂಡು ಹೋಗಿದ್ದರು. ಇದೀಗ ಜೂನ್ 1ರಿಂದ ಮದ್ಯಪಾನ ಸಿಗಲ್ಲ ಎಂದು ಹೇಳಲಾಗುತ್ತಿದೆ. ಅದು ಆರು ದಿನಗಳ ಕಾಲ ಮದ್ಯಪಾನ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಎಲ್ಲಾ ಬಾರ್ ಗಳು ಬಂದ್ ಆಗಲಿವೆ.

ಎಂಎಲ್ಸಿ ಚುನಾವಣೆ ಇರುವ ಕಾರಣ ಹಾಗೇ ಜೂನ್ 4ರಂದು ಬಹಳ ಮುಖ್ಯವಾಗಿ ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವ ಕಾರಣ ಎಣ್ಣೆ ಮಾರಾಟ ಇರುವುದಿಲ್ಲ. ಜೂನ್ 3ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಜೂನ್ 4ರಂದು ಲೋಕಸಭೆ ಚುನಾಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 6ರಂದು ಎಂಎಲ್ಸಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಈ ಎಲ್ಲಾ ದಿನಗಳಲ್ಲೂ ಮದ್ಯದಂಗಡಿಯ ಬಾಗಿಲು ಮುಚ್ಚಿರುತ್ತದೆ. ಮದ್ಯಪ್ರಿಯರು ಜೂನ್ 1ರ ಒಳಗೆ ಎಷ್ಟು ಆಗುತ್ತೋ ಅಷ್ಟು ಎಣ್ಣೆ ಶೇಖರಿಸಿಟ್ಟುಕೊಳ್ಳಬಹುದು.

ಈ ಬಾರಿಯ ಲೋಕಸಭಾ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಬಾರಿಸುವ ಮೂಲಕ ಮತ್ತೆ ಪ್ರಧಾನಿ ಪಟ್ಟ ಅಲಂಕರಿಸುತ್ತಾರಾ..? ಬಿಜೆಪಿಯನ್ನು ಸೋಲಿಸಲೆ ಎಂದೆ ಇಂಡಿಯಾ ಕೂಟ ಒಂದಾಗಿದೆ. ಆ ಪಕ್ಷವೇನಾದರೂ ಗೆಲ್ಲಲಿದೆಯಾ ಎಂಬೆಲ್ಲಾ ಪ್ರಶ್ನೆಗಳು ಜನರನ್ನು ಕಾಡುತ್ತಿದೆ. ಈ ಬಾರಿ ಮತದಾರ ಯಾರ ಕೈಹಿಡಿದಿದ್ದಾನೆ ಎಂಬುದು ಜೂನ್ 4ರಂದು ಬಹಿರಂಗವಾಗಲಿದೆ. ಆ ದಿನ ಕೂಡ ಸಮೀಪಿಸುತ್ತಿದೆ. ದೇಶದ ಕೆಲವೆಡೆ ಇನ್ನು ಮತದಾನ ನಡೆಯುತ್ತದೆ ಇದೆ. ಜೂನ್ 4ಕ್ಕೆ ಫಲಿತಾಂಶ ಹೊರ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!