Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕಕ್ಕೂ ಮಳೆ ಸೂಚನೆ

---Advertisement---

ಬೆಂಗಳೂರು: ಬೆಳಗ್ಗೆಯಿಂದಾನೇ ಬೆಂಗಳೂರು ನಗರದಲ್ಲಿ ವಾತಾವರಣ ಕೂಲ್ ಕೂಲ್ ಎನಿಸಿದೆ. ಮಂಜು ಕವಿದ ನಗರದಲ್ಲಿ ಬಿಸಿಲು ಕಾಣಿಸುತ್ತಿಲ್ಲ. ಇದೀಗ ಮಳೆ ಬರುವ ಮಜನ್ಸೂಚನೆಯನ್ನು ನೀಡಿದೆ ಹವಮಾನ ಇಲಾಖೆ. ಚಳಿಗಾಲ ಶುರುವಾಗಿದೆ, ಬೆಳೆಕೊಯ್ಲು ಆರಂಭವಾಗಿರುವಾಗ ಮಳೆ ಬಂದರೆ ರೈತನ ಪಾಡೇನು ಎಂಬಂತ ಚಿಂತೇಗೀಡಾಗಿದೆ. ಇದಕ್ಕೆಲ್ಲ ಕಾರಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದು.

ಹೌದು, ಬಂಗಾಳಕೊಲ್ಲಿಯಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾದ ಹಿನ್ನೆಲೆ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮಳೆರಾಯ ಆರ್ಭಟಿಸಲು ಶುರು ಮಾಡಿದೆ. ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ನಾಳೆ ತಮಿಳುನಾಡು ಭಾಗದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

ಇದರ ಪರಿಣಾಮ ಕೇರಳ, ಕರ್ನಾಟಕ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಎರಡು ದಿನಗಳ ಕಾಲ ಮಳೆ ಬೀಳಲಿದೆ. ಇಂದು ಬೆಳಗ್ಗೆಯಿಂದಾನೇ ಚಳಿ ಜಾಸ್ತಿಯಾಗಿತ್ತು. ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಆರಂಭದಲ್ಲಿಯೇ ಇಷ್ಟೊಂದು ಚಳಿಯಾಗುತ್ತಿದ್ದು, ಮಳೆಯೂ ಬಿದ್ದರೆ ಚಳಿಯ ವಾತಾವರಣ ಇನ್ನಷ್ಟು ಜೋರಾಗಲಿದೆ. ಕೊರೆಯುವ ಚಳಿಯಲ್ಲಿ ಮಳೆಯಲ್ಲೂ ಹೆಣಗಾಡಬೇಕಾಗಿದೆ. ಇನ್ನು ಈ ಸಮಯಕ್ಕೆ ಮಳೆ ಬಂದರೆ ಬೆಳೆ ಹಾಳಾಗುತ್ತದೆ. ಇದರಿಂದ ರೈತರಿಗೆ ನಷ್ಟ ಉಂಟಾಗಲಿದೆ ಎಂದು ರೈತರು ಆತಂಕ ಪಡುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ಮಳೆಯ ಪ್ರಮಾಣ ಎಷ್ಟಿದೆ ಎಂಬುದನ್ನ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...