Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಚಿವ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಶಾಸಕ..!

---Advertisement---

ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಣ್ ಟಿಪ್ಪು ವಿಚಾರವನ್ನಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಅದೇ ರೀತಿ ಹೊಡೆದು ಹಾಕಬೇಕು ಎಂದು ಹೇಳೀದ್ದರು. ಈ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಸಿದ್ದರಾಮಯ್ಯ ಟ್ವೀಟ್ ಮೂಲ ಆಕ್ರೋಶ ಹೊರ ಹಾಕಿದರು. ಬಳಿಕ ತಮ್ಮ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ಸಮರ್ಥನೆ ಕೂಡ ನೀಡಿದ್ದಾರೆ. ಕ್ಷಮೆ ಕೂಡ ಕೇಳಿದ್ದಾರೆ. ಆದ್ರೆ ಈ ವಿಚಾರ ತಣ್ಣಗಾಗುವ ಲಕ್ಷಣಗಳೆ ಕಾಣಿಸುತ್ತಿಲ್ಲ. ಇದೀಗ ಅವರದ್ದೇ ಪಕ್ಷದವರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದಾರೆ.

ಇಂತಹ ಹೇಳಿಕೆಯನ್ನು ನಾವೂ ಒಪ್ಪುವಂತದ್ದಲ್ಲ. ರಾಜಕೀಯದಲ್ಲಿ ಟೀಕೆಗಳು ಸಹಜ. ಆದ್ರೆ ಈ ರೀತಿಯಾಗಿ ಯಾವ ರಾಜಕಾರಣಿಯೂ ಮಾತನಾಡಬಾರದು. ಈ ರೀತಿಯ ನಡವಳಿಕೆಗಳು ರಾಜಕೀಯಕ್ಕೆ ಶೋಭೆ ತರುವಂತದ್ದಲ್ಲ. ಸಿದ್ಧಾಂತವನ್ನು ಟೀಕಿಸುವ ಮೂಲಕ ವ್ಯಕ್ತಿಯನ್ನು ಎದುರಿಸಬೇಕು. ಆದ್ರೆ ಹೀಗೆ ವೈಯಕ್ತಿಕವಾಗಿ ಈ ರೀತಿಯ ಮಾತುಗಳನ್ನು ಆಡಬಾರದು ಎಂದಿದ್ದಾರೆ.

ಇದೇ ವೇಳೆ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡಿದ ಯತ್ನಾಳ್, ಟಿಪ್ಪುವನ್ನು ಆದರ್ಶ ಮಾಡಿಕೊಂಡವರ ಕಥೆಗಳನ್ನು ನಾವೂ ನೋಡಿದ್ದೇವೆ. ಟಿಪ್ಪು ಖಡ್ಗ ತಂದ ಮಲ್ಯ ವಿದೇಶಕ್ಕೆ ಓಡಿ ಹೋಗಿದ್ದಾನೆ. ಟಿಪ್ಪು ಸಿನಿಮಾ ತೆಗೆದವರೆಲ್ಲಾ ಏನಾದರೂ ಅಂತ ನೋಡಿದ್ದೇವೆ. ಹಿಂದೂಗಳ ಕಗ್ಗೋಲೆ ನಡೆಸಿದಂತ ಟಿಪ್ಪುವನ್ನು ಕಾಂಗ್ರೆಸ್ ಮೆಚ್ಚಿಕೊಂಡಿದೆ. ಅದು ಕೂಡ ಅಂತ್ಯ ಕಾಣಲಿದೆ. ಸಿದ್ದರಾಮಯ್ಯ ರಾಜಕೀಯ ಅಂತ್ಯಕ್ಕೆ ಟಿಪ್ಪು ಮೇಲಿನ ಒಲವೇ ಕಾರಣವಾಗುತ್ತೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...