Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2018ರಲ್ಲಿ ಭೂಮಿಪೂಜೆಯಾಗಿದ್ದ ಬಸವ ಅಂತರಾಷ್ಟ್ರೀಯ ಕೇಂದ್ರಕ್ಕೆ ಸಿದ್ದರಾಮಯ್ಯರಿಂದ ಮತ್ತೆ ಉದ್ಘಾಟನೆ ಭಾಗ್ಯ ಸಿಗುತ್ತಾ..?

---Advertisement---

ಬಾಗಲಕೋಟೆ: ಸಿದ್ದರಾಮಯ್ಯ ಅವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಕಾರಣ ಬಸವ ಅಂತರಾಷ್ಟ್ರೀಯ ಕೇಂದ್ರದ ಬಗ್ಗೆ ಮತ್ತೆ ಭರವಸೆ ಮೂಡಿದೆ. ಯಾಕಂದ್ರೆ 2018 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಬಸವ ಅಂತರಾಷ್ಟ್ರೀಯ ಕೇಂದ್ರಕ್ಕೆ ಗುದ್ದಲಿ ಪೂಜೆ ನಡೆದಿತ್ತು. ಆದರೆ ಬಳಿಕ ನೆನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುವ ಕಾರಣ, ಮತ್ತೆ ನೆನೆಗುದಿಗೆ ಬಿದ್ದಿರುವ ಯೋಜನೆಗೆ ಮತ್ತೆ ಶುರುವಾಗುವ ಸಾಧ್ಯತೆ ಇದೆ.

140 ಕೋಟಿ ವೆಚ್ಚದಲ್ಲಿ ಅಕ್ಷರಧಾಮ ಮಾದರಿಯಲ್ಲಿ ಬಸವ ಅಂತಾರಾಷ್ಟ್ರೀಯ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಶಿಲಾನ್ಯಾಸಗೊಂಡು ಐದು ವರ್ಷಕ್ಕೂ ಅಧಿಕವಾಗಿದ್ದು ಇದುವರೆಗೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಅನುಭವ ಮಂಟಪ, ಸನ್ನಿವೇಶಗಳನ್ನು ಚಿತ್ರಕಲೆ, ಶಿಲ್ಪಕಲೆ, ತ್ರಿ ಡಿ ತಂತ್ರಜ್ಞಾನ ಬಳಸಿ ಪ್ರದರ್ಶನ ಮಾಡುವುದು, ಬಸವ ಅಂತಾರಾಷ್ಟ್ರೀಯ ಮ್ಯೂಜಿಯಂ, ಶರಣ ಗ್ರಾಮ ನಿರ್ಮಾಣ ಕಲ್ಪನೆಯನ್ನು ಈ ಅಂತರಾಷ್ಟ್ರೀಯ ಕೇಂದ್ರದಲ್ಲಿ ಮಾಡಲಾಗಿದೆ.

ಭೂಮಿ ಪೂಜೆ ಮಾಡಿದ್ಧ ಸಿದ್ದರಾಮಯ್ಯ ಇದೀಗ ಮತ್ತೆ ಸಿಎಂ ಆಗಿದ್ದು ಸಿದ್ದರಾಮಯ್ಯ ಸರಕಾರದಲ್ಲಿ ಬಸವ ಅಂತರಾಷ್ಟ್ರೀಯ ಕೇಂದ್ರ ಕಾಮಗಾರಿ ಪೂರ್ಣವಾಗಲಿ ಎಂದು ಜನರು ಮನವಿ ಮಾಡಿದ್ದಾರೆ. ಈ ಬಗ್ಗೆ ಹುನಗುಂದ ಶಾಸಕ ವಿಜಯಟನಂದ ಕಾಶಪ್ಪನವರು ಮಾತನಾಡಿ, 2018ರ ಅವಧಿಯಲ್ಲಿ ಸಿಎಂ ಆಗಿದ್ದ ವೇಳೆ ಹಣ ಬಿಡುಗಡೆಯಾಗಿದೆ. ಆದರೆ ಮುಂದೆ ಬಂದ ಸರಕಾರ ಹಾಗೂ ಆಗ ಹುನಗುಂದ ಶಾಸಕರಾಗಿದ್ದ ದೊಡ್ಡನಗೌಡ ಪಾಟಿಲ್ ಇದರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment