Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಸವ ಪುತ್ಥಳಿ ಪ್ರತಿಷ್ಠಾಪನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 15 : ವೀರಶೈವ ಲಿಂಗಾಯಿತ ಯುವ ವೇದಿಕೆಯಿಂದ ಚಂದ್ರವಳ್ಳಿ ಕ್ರಾಸ್ ಹತ್ತಿರ ಬಸವ ಪುತ್ಥಳಿಯನ್ನು ಮಂಗಳವಾರ ಪ್ರತಿಷ್ಠಾಪಿಸಲಾಯಿತು.

ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ಮಾತನಾಡಿ ಹನ್ನೆರಡನೆ ಶತಮಾನದ ಕ್ರಾಂತಿಕಾರಿ, ಭಕ್ತಿ ಭಂಡಾರಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಮಹಿಳೆಯರಿಗೂ ಸಮಾನತೆ ಕಲ್ಪಿಸಿದರು. ಕಾಯಕವೆ ಕೈಲಾಸ ಎನ್ನುವುದು ಬಸವಣ್ಣನವರ ಧ್ಯೇಯವಾಗಿತ್ತು. ಅಂತಹ ಮಹಾನ್ ಪುರುಷನ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದರು.

ಗೌರವಾಧ್ಯಕ್ಷ ಅಶೋಕ್, ಉಪಾಧ್ಯಕ್ಷ ಗಿರೀಶ್, ಕೆ.ಡಿ.ಪಿ.ಸದಸ್ಯ ನಾಗರಾಜ್, ಗಾರೆಹಟ್ಟಿ ವಿಜಯಕುಮಾರ್, ಕಾರ್ತಿಕ್, ರುದ್ರೇಶ್, ಮಂಜುನಾಥ್, ಶಿವಕುಮಾರ್, ಹನೀಸ್,
ಅಜೀಮ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...