Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರಪ್ಪನಿಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಯತ್ನಾಳ್ ಸವಾಲ್

Facebook
Twitter
Telegram
WhatsApp

ವಿಜಯಪುರ: ಅವರಪ್ಪನಿಗೆ ಹುಟ್ಟಿದ್ದರೆ ಅವರು ಯಾವ ಸಿಡಿ ಇವೆ ಎನ್ನುತ್ತಿದ್ದಾರೆ ಅವುಗಳನ್ನು ಬಿಡುಗಡೆ ಮಾಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ
ಸಿಡಿ ಬಿಡುಗಡೆ ಬೆದರಿಕೆ ಫೋಟೋ ವೈರಲ್ ವಿಚಾರ ವಿರುದ್ಧ ವಿಜಯಪುರ ನಗರ ಯತ್ನಾಳ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇದರಲ್ಲಿ ಯಾರ‌್ಯಾರು ಇದ್ದಾರೆ ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮ್ಮ ಬಳಿ ಮಾಹಿತಿ ಇದೆ. ಅವರಿಗೆಲ್ಲ ಸರಿಯಾಗಿ ತಕ್ಕ ಶಾಸ್ತಿ ಆಗುತ್ತದೆ. ನಮ್ಮ ಪೊಲೀಸರು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ತಾವೇನು ಈ ಕುರಿತು ಗೃಹ ಸಚಿವರಿಗೆ ಮಾತನಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭ್ರಷ್ಟಾಚಾರದ ವಿರುದ್ದ ಮತ್ತು ಹಿಂದುತ್ವದ ಪರವಾಗಿ ನಾನು ಮಾತನಾಡುತ್ತೇನೆ. ಇದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ. ಈ ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಬ್ಬರೊಗೆ ಸೇರಿದ ಸಿಡಿ ತಯಾರಿಸುವ ಫ್ಯಾಕ್ಟರಿಗಳಿವೆ. ಈ ಬಗ್ಗೆ ಜನೇವರಿ 14 ರಂದು ಸಂಕ್ರಮಣದ ದಿನವೇ ಹೇಳಿಕೆ ನೀಡಿದ್ದೇನೆ. ಈ ರೀತಿ ಬೆದರಿಕೆ ಗಾಕುವ ಮೂಲಕ ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿಡಿನೇ ಇಲ್ಲ. ಅದು ಇದ್ದರೆ ತಾನೇ ಬಿಡುಗಡೆ ಆಗಬೇಕು ಎಂದು ಯತ್ನಾಳ ಹೇಳಿದರು.

ಯಾರಾದರೂ ವಿಡಿಯೋ ಕಾಲ್ ಮಾಡಿದಾಗ ಕೆಲವೋಮ್ಮೆ ನಾನು ರಿಸೀವ್ ಮಾಡುತ್ತೇ‌ನೆ. ಕಾರ್ಯಕರ್ತರು ಕೆಲವೊಮ್ಮೆ ಒತ್ತಾಯ ಮಾಡಿದಾಗ ನಾನು ವಿಡಿಯೋ ಕಾಲ್ ರಿಸೀವ್ ಮಾಡುತ್ತೇನೆ. ಪ್ರತಿನಿತ್ಯ ಹಲವಾರು ಜನ ನಿಮ್ಮ ಮುಖ ನೋಡಬೇಕು ವಿಡಿಯೋ ಕಾಲ್ ಮಾಡಿ ಅಂತಾರೆ. ಇಂಥ ಸಂದರ್ಭದಲ್ಲಿ ನಾನು ಊಟ ಮಾಡುವಾಗ, ಮಲಗಿರುವಾಗ ಮಾತನಾಡಿದ ಸ್ಕ್ರೀನ್ ಶಾಟ್ ತೆಗೆದುಕೊಂಡಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಈಗ ಕೆಲವರು ಗಾಕಿರುವ ಬೆದರಿಕೆ ಪೋಸ್ಡ್ ಗಳ ಕುರಿತು ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ಈ ಕುರಿತು ತನಿಖೆ ಮಾಡುತ್ತಾರೆ. ಈ ಬಗ್ಗೆ ತಾವೇನೂ ಗೃಹ ಸಚಿವರಿಗೆ ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಯಾರು ಬೆಳೆಯುತ್ತಿದ್ದಾರೆ, ಯಾರು ನೇರವಾಗಿ ಮಾತನಾಡುತ್ತಾರೆ, ಅಂಥವವನ್ನು ತುಳಿಯುವ ಪ್ರಯತ್ನ ಇದಾಗಿದೆ. ಇಂಥ ನೂರು ಆರೋಪ ಬಂದರೂ ಎದುರಿಸುವ ತಾಕತ್ತು ನನಗಿದೆ. ಆ ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಅವರು ತಿಳಿಸಿದರು.

ಅವರಪ್ಪನಿಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ. ಯತ್ನಾಳನನ್ನು ಕುಗ್ಗಿಸಲು ಯಾರ ಅಪ್ಪನಿಗೂ ಆಗಲ್ಲ. ಅವರ ಅಪ್ಪನಿಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ ಯತ್ನಾಳ, ಯತ್ನಾಳ್ ನನ್ನು ಏನು ಮಾಡಿದರೂ ಕುಗ್ಗಿಸಲು ಆಗುವುದಿಲ್ಲ. ನನ್ನ ಬಾಯಿ ಬಂದ್ ಮಾಡಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!