Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರಪ್ಪನಿಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಯತ್ನಾಳ್ ಸವಾಲ್

Facebook
Twitter
Telegram
WhatsApp

ವಿಜಯಪುರ: ಅವರಪ್ಪನಿಗೆ ಹುಟ್ಟಿದ್ದರೆ ಅವರು ಯಾವ ಸಿಡಿ ಇವೆ ಎನ್ನುತ್ತಿದ್ದಾರೆ ಅವುಗಳನ್ನು ಬಿಡುಗಡೆ ಮಾಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ
ಸಿಡಿ ಬಿಡುಗಡೆ ಬೆದರಿಕೆ ಫೋಟೋ ವೈರಲ್ ವಿಚಾರ ವಿರುದ್ಧ ವಿಜಯಪುರ ನಗರ ಯತ್ನಾಳ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇದರಲ್ಲಿ ಯಾರ‌್ಯಾರು ಇದ್ದಾರೆ ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮ್ಮ ಬಳಿ ಮಾಹಿತಿ ಇದೆ. ಅವರಿಗೆಲ್ಲ ಸರಿಯಾಗಿ ತಕ್ಕ ಶಾಸ್ತಿ ಆಗುತ್ತದೆ. ನಮ್ಮ ಪೊಲೀಸರು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ತಾವೇನು ಈ ಕುರಿತು ಗೃಹ ಸಚಿವರಿಗೆ ಮಾತನಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭ್ರಷ್ಟಾಚಾರದ ವಿರುದ್ದ ಮತ್ತು ಹಿಂದುತ್ವದ ಪರವಾಗಿ ನಾನು ಮಾತನಾಡುತ್ತೇನೆ. ಇದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ. ಈ ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಬ್ಬರೊಗೆ ಸೇರಿದ ಸಿಡಿ ತಯಾರಿಸುವ ಫ್ಯಾಕ್ಟರಿಗಳಿವೆ. ಈ ಬಗ್ಗೆ ಜನೇವರಿ 14 ರಂದು ಸಂಕ್ರಮಣದ ದಿನವೇ ಹೇಳಿಕೆ ನೀಡಿದ್ದೇನೆ. ಈ ರೀತಿ ಬೆದರಿಕೆ ಗಾಕುವ ಮೂಲಕ ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿಡಿನೇ ಇಲ್ಲ. ಅದು ಇದ್ದರೆ ತಾನೇ ಬಿಡುಗಡೆ ಆಗಬೇಕು ಎಂದು ಯತ್ನಾಳ ಹೇಳಿದರು.

ಯಾರಾದರೂ ವಿಡಿಯೋ ಕಾಲ್ ಮಾಡಿದಾಗ ಕೆಲವೋಮ್ಮೆ ನಾನು ರಿಸೀವ್ ಮಾಡುತ್ತೇ‌ನೆ. ಕಾರ್ಯಕರ್ತರು ಕೆಲವೊಮ್ಮೆ ಒತ್ತಾಯ ಮಾಡಿದಾಗ ನಾನು ವಿಡಿಯೋ ಕಾಲ್ ರಿಸೀವ್ ಮಾಡುತ್ತೇನೆ. ಪ್ರತಿನಿತ್ಯ ಹಲವಾರು ಜನ ನಿಮ್ಮ ಮುಖ ನೋಡಬೇಕು ವಿಡಿಯೋ ಕಾಲ್ ಮಾಡಿ ಅಂತಾರೆ. ಇಂಥ ಸಂದರ್ಭದಲ್ಲಿ ನಾನು ಊಟ ಮಾಡುವಾಗ, ಮಲಗಿರುವಾಗ ಮಾತನಾಡಿದ ಸ್ಕ್ರೀನ್ ಶಾಟ್ ತೆಗೆದುಕೊಂಡಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಈಗ ಕೆಲವರು ಗಾಕಿರುವ ಬೆದರಿಕೆ ಪೋಸ್ಡ್ ಗಳ ಕುರಿತು ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ಈ ಕುರಿತು ತನಿಖೆ ಮಾಡುತ್ತಾರೆ. ಈ ಬಗ್ಗೆ ತಾವೇನೂ ಗೃಹ ಸಚಿವರಿಗೆ ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಯಾರು ಬೆಳೆಯುತ್ತಿದ್ದಾರೆ, ಯಾರು ನೇರವಾಗಿ ಮಾತನಾಡುತ್ತಾರೆ, ಅಂಥವವನ್ನು ತುಳಿಯುವ ಪ್ರಯತ್ನ ಇದಾಗಿದೆ. ಇಂಥ ನೂರು ಆರೋಪ ಬಂದರೂ ಎದುರಿಸುವ ತಾಕತ್ತು ನನಗಿದೆ. ಆ ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಅವರು ತಿಳಿಸಿದರು.

ಅವರಪ್ಪನಿಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ. ಯತ್ನಾಳನನ್ನು ಕುಗ್ಗಿಸಲು ಯಾರ ಅಪ್ಪನಿಗೂ ಆಗಲ್ಲ. ಅವರ ಅಪ್ಪನಿಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ ಯತ್ನಾಳ, ಯತ್ನಾಳ್ ನನ್ನು ಏನು ಮಾಡಿದರೂ ಕುಗ್ಗಿಸಲು ಆಗುವುದಿಲ್ಲ. ನನ್ನ ಬಾಯಿ ಬಂದ್ ಮಾಡಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!