Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಂತಸ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.19 :  ಸಿದ್ದರಾಮಯ್ಯ ನೇತೃತ್ವದ ಬಸವ ತತ್ವದಡಿಯ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಕರ್ನಾಟಕದ ಘನತೆಯನ್ನು ಹೆಚ್ಚಿಸಿದೆ ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.

ಶತಮಾನಗಳು ಉರುಳಿದರೂ ಈ ಸಮಾಜ ಅಸಮಾನತೆ, ಜಾತಿ ತಾರತಮ್ಯ, ಮೇಲು ಕೀಳು, ಶ್ರೇಷ್ಠ ಕನಿಷ್ಠ ಈ ಬಗೆಯ ನಾನಾ ರೋಗಗಳನ್ನು ತನ್ನ ಬೆನ್ನಿಗೆ ಅಂಟಿಸಿಕೊಂಡೇ ಬರುತ್ತಿದೆ. ಹಿಡಿಯಷ್ಟು ಜನ ಫಲಾನುಭವಿಗಳಾಗಳು ಬಹುಪಾಲು ಜನ ತೊಂದರೆ ಅನುಭವಿಸಬೇಕಾದ ಪರಿಪಾಠ ಇಂದಿಗೂ ನಿಂತಿಲ್ಲ, ಇರಲಿಕ್ಕೊಂದು ಸಾರು, ತೊಡಲಿಕ್ಕೊಂದು ಬಟ್ಟೆ, ದುಡಿಯಲಿಕ್ಕೊಂದು ಕಾಯಕ ಒದಗಿಸಲಾರದ ಈ ಸಮಾಜ ದ್ವೇಷಾಸೂಯೆಗಳನ್ನು ಮಾತ್ರ ಮುಂದಿನ ಶತಮಾನಗಳಿಗೂ ಹೆಚ್ಚಾಗುವಷ್ಟು ಬಿತ್ತುತ್ತಿದೆ. ಇದು ಬಹಳ ಆತಂಕದ ವಿಚಾರ. ಬಸವಣ್ಣನಂತಹ ಶ್ರೇಷ್ಠ ಚಿಂತಕ ಹನ್ನೆರಡನೇ ಶತಮಾನದಲ್ಲಿ ನಮ್ಮ ನಾಡಿಗೆ ಕೊಟ್ಟ ಅರಿವು ಜಾಗತಿಕ ಮಟ್ಟದಲ್ಲಿ ಯಾವ ಭೂಭಾಗದಲ್ಲಿ ಕೂಟ್ಟಿರಲಾರರು. ಶತಮಾನಗಳ ಹಿಂದಿನ ಅವರು ನೀಡಿದ ಅರಿವಿನ ವಚನಗಳ ಸಾರ ಇಂದಿಗೂ ಪ್ರಸ್ತುತವಾಗಿದೆ. ಅವರು ನಿಜವಾದ ಅರ್ಥದಲ್ಲಿ ಸಮಾಜೋ-ಧಾರ್ಮಿಕ ಸುಧಾರಕರು. ಅವರ ವಚನಗಳು ಉದಾತ್ತ ಚಿಂತನೆಗಳಿಂದ ಕೂಡಿವೆ. ನಮ್ಮ ಬುದ್ಧಿ ಮನಸ್ಸುಗಳನ್ನು ಕ್ರಿಯಾಶೀಲವಾಗಿಸುವ, ಚೈತನ್ಯ ತುಂಬುವ ಒಂದು ಅದ್ಭುತ ಶಕ್ತಿ. ಅವರ ಚಿಂತನೆ ನಮಗೆ ಆದರ್ಶಗಳು, ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತದೆ.

ಜನಭಾಷೆಯನ್ನು ದೇವ ಭಾಷೆಯನ್ನಾಗಿಸಿದ ಶಿಷ್ಟದಿಂದ ಪರಿಶಿಷ್ಟದ ಕಡೆಗೆ, ಕೇಂದ್ರದಿಂದ ಅಂಚಿನ ಕಡೆಗೆ, ಪುರುಷ ಶಾಹಿಯಿಂದ ಲಿಂಗ ಸಂಬಂಧಿ ಸಮಾನತೆ ಕಡೆಗೆ, ಏಕರೂಪಿ ಸಮಾನತೆಯಿಂದ ಬಹುರೂಪಿ ಸಮಾನತೆಗೆ ಕಡೆಗೆ, ಆಲಯದಿಂದ ಬಯಲ ಕಡೆಗೆ ಹರಿಯುವಂತೆ-ಸರಿಯುವಂತೆ  ಮಾಡುವಲ್ಲಿ ಬಸವ ಸಂಸ್ಕೃತಿಯ ಕಾಣಿಕೆ ಅಪಾರವಾಗಿದೆ.

ಬಹುಸಂಖ್ಯೆಯ ಶಿವಶರಣರು-ಶರಣೆಯರು ವಿವಿಧ ಕಾಯಕ ಜಾತಿಯ ಸಂಸ್ಕೃತಿಯ ರಾಯಬಾರಿಗಳು. ಬಹುಜಾತಿಯ ಸಂಸ್ಕೃತಿಯ ರಾಯಭಾರಿಗಳ ನಾಯಕ ಬಸವಣ್ಣ. ಶಿವಶರಣರೇ ಒಪ್ಪುವಂತೆ ಅವರೆಲ್ಲರ ಸಾಂಸ್ಕೃತಿಕ ನಾಯಕ ಬಸವಣ್ಣ ಎಂಬುದು ಸಮರ್ಥನೀಯ.

ಈ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ, ತಾರತಮ್ಯಗಳನ್ನು ಮೀರಬೇಕೆಂದು ಹೇಳಿದ, ಬದುಕನ್ನು ಕಾಯಕ ಪ್ರಧಾನವಾಗಿ ರೂಪಿಸಿಕೊಳ್ಳಬೇಕೆಂದು ನೀವೇದಿಸಿಕೊಂಡ ವಿಶ್ವ ಮಾನವತಾವಾದಿ, ಎಲ್ಲ ನೊಂದ ಜನರಿಗೆ ಆತ್ಮವಿಶ್ವಾಸ ನೀಡುವ ಮನ್ವಂತರ ಪ್ರವರ್ತಕ ಬಸವಣ್ಣ, ನಮ್ಮ ರಾಜ್ಯದ ಸಾಂಸ್ಕೃತಿಕ ನಾಯಕ ಅಂತ ಘನತೆಯಿಂದ ಗೌರವದಿಂದ ಗರ್ವದಿಂದ ಹೇಳೋಣ ಎಂದು
ಜಗದ್ಗುರ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment