ಶೋಷಿತ ಜಾತಿಗಳಿಗೆ ಸಮಾನತೆ ಸಿಗಬೇಕೆನ್ನುವುದು ಬಸವಣ್ಣನವರ ಪರಿಕಲ್ಪನೆ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.23) : ಹನ್ನೆರಡನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದ ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.

ಭಾರತೀಯ ಜನತಾಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಬಸವ ಜಯಂತಿಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಶೋಷಿತ ಜಾತಿಗಳಿಗೆ ಸಮಾನತೆ ಸಿಗಬೇಕೆನ್ನುವುದು ಬಸವಣ್ಣನವರ ಪರಿಕಲ್ಪನೆಯಾಗಿತ್ತು. ಅದರ ಆಧಾರದ ಮೇಲೆ ಇಂದಿನ ಸಂಸತ್ ರಚನೆಯಾಗಿರುವುದು. ಅಂತರ್ಜಾತಿ ವಿವಾಹಕ್ಕೆ ಮನ್ನಣೆ ಕೊಟ್ಟ ಬಸವಣ್ಣನವರ ಆಶಯದಂತೆ ದೇಶದಲ್ಲಿ ಭಾರತೀಯ ಜನತಾಪಾರ್ಟಿ ಅಧಿಕಾರ ನಡೆಸುತ್ತಿದ್ದು, ಅಂತ್ಯೋದಯದ ಮೂಲಕ ಎಲ್ಲಾ ಬಡವರಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವಲ್ಲಿ ಯಶಸ್ವಿಯಾಗಿದೆ ಎಂದು ಗುಣಗಾನ ಮಾಡಿದರು.

ಜಿಲ್ಲಾ ಚುನಾವಣಾ ಸಹ ಸಂಚಾಲಕ ಮಲ್ಲಿಕಾರ್ಜುನ್ ಮಾತನಾಡಿ ಸಮಾನತೆಯ ಸಂದೇಶವನ್ನು ಸಾರಿದ ಭಕ್ತಿ ಭಂಡಾರಿ, ಕ್ರಾಂತಿಕಾರಿ ಜಗಜ್ಯೋತಿ ಬಸವಣ್ಣನವರ ಆದರ್ಶ, ಸಿದ್ದಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಬಿಜ್ಜಳನ ಆಡಳಿತದಲ್ಲಿ ಮಂತ್ರಿಯಾಗಿದ್ದಾಗ ಎಲ್ಲಾ ಸಮಾಜದವರಿಗೂ ಅಧಿಕಾರವನ್ನು ಹಂಚಿಕೆ ಮಾಡಿದ ಮಹಾನ್ ಮಾನವತಾವಾದಿ ಬಸವಣ್ಣ ಶೋಷಿತ ಸಮಾಜವನ್ನು ಮೇಲೆತ್ತುವ ನಿಟ್ಟಿನಲ್ಲಿ ಕೆಲಸ ಮಾಡಿದವರು. ಹಾಗಾಗಿ ಪ್ರತಿ ಬೂತ್ ಮತ್ತು ಗ್ರಾಮಗಳಲ್ಲಿ ಬಸವಣ್ಣನವರ ಆಶಯದಂತೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು.

ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಡಾ.ಸಿದ್ದಾರ್ಥ, ಜಿಲ್ಲಾ ಉಪಾಧ್ಯಕ್ಷರುಗಳಾದ ಚಂದ್ರಿಕಾ ಲೋಕನಾಥ್, ಶ್ಯಾಮಲ ಶಿವಪ್ರಕಾಶ್, ಕಾರ್ಯದರ್ಶಿ ಎ.ರೇಖ, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್ ನಗರ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಡಿ.ಎಸ್.ಹಳ್ಳಿ, ವೆಂಕಟೇಶ್, ಶಂಭು, ಕವನ, ರತ್ನಮ್ಮ, ಮಂಜುಳಮ್ಮ, ಶಾಂತಮ್ಮ, ಬಸಮ್ಮ, ನಗರಸಭೆ ಸದಸ್ಯ ಜಯಣ್ಣ, ಮುಕ್ಕಣ್ಣ ಹಾಜರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago