Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವಣ್ಣನವರ ಹೆಸರು ಸೂರ್ಯ-ಚಂದ್ರ ಇರೋವರಿಗೆ ಅಜರಾಮರವಾಗಿರುತ್ತದೆ : ಶಾಸಕ‌ ಟಿ.ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ನ.15): ಬಸವಣ್ಣನವರ ಕಾಯಕ‌ ಮತ್ತು ದಾಸೋಹದ  ತತ್ವಗಳನ್ನು ಈಗಿನ‌ ಯುವ ಪೀಳಿಗೆಯು ರೂಡಿಸಿಕೊಳ್ಳಬೇಕು ಎಂದು ವಿಜಯಪುರ ವನಶ್ರೀ ಸಂಸ್ಥಾನ ಮಠದ ಬಸವಕುಮಾರ್ ಸ್ವಾಮಿಗಳು ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪ ಹಿಂಬದಿಯಲ್ಲಿ ನಿರ್ಮಾಣವಾಗಿರುವ ಶ್ರೀಬಸವೇಶ್ವರ ಕಲ್ಯಾಣ ಮಂಟಪವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಹುಟ್ಟಿರುವ ಪ್ರತಿಯೊಬ್ಬ  ಮನುಷ್ಯನಿಗೂ ಒಂದು ಚರಿತ್ರೆಯಿದೆ. ಆ ಉತ್ತಮ ಚರಿತ್ರೆ ಚಳ್ಳಕೆರೆ ವೀರ ಶೈವ ಸಮಾಜಕ್ಕೆ ಇದೆ ಎಂದು ಹೇಳಿದರು.
ಎಲ್ಲಾ ಸಮಾಜದವರಿಗೂ ಸಾರ್ವಜನಿಕರಿಗೆ ಸೇವೆ ನೀಡುವಂತ ವೀರಶೈವ ಕಲ್ಯಾಣ ಮಂಟಪವನ್ನು  ಸಮಾಜದವರು ನಿರ್ಮಾಣ ಮಾಡಿ ಈಗ ಬಸವೇಶ್ಚರ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು.

ವೀರ ಶೈವ ಸಮಾಜದ ಪೂರ್ವಜರು ದೂರದೃಷ್ಟಿಯನ್ನು ಇಟ್ಟುಕೊಂಡು ಚಳ್ಳಕೆರೆಯಲ್ಲಿ ವೀರಶೈವ ಕಲ್ಯಾಣ ಮಂಟಪವನ್ನು ಸ್ಥಾಪನೆ ಮಾಡಿದರು. ಅಂತಹ ಮಹಾನೀಯರನ್ನು ನೆನಯಬೇಕು ಎಂದರು.

ಶಾಸಕ‌ ಟಿ.ರಘುಮೂರ್ತಿ ಮಾತನಾಡಿ 12 ನೇ ಶತಮಾನದಲ್ಲಿ ಮನುಕುಲಕ್ಕೆ ಸೇವೆ ಸಲ್ಲಿಸಿದ ಬಸವಣ್ಣನವರ ಹೆಸರು ಸೂರ್ಯ-ಚಂದ್ರ ಇರೋವರಿಗೆ ಅಜರಾಮರವಾಗಿರುತ್ತದೆ ಎಂದು ಹೇಳಿದ ಅವರು ಇಂದು ಶ್ರೀಬಸವೇಶ್ವರ ಕಲ್ಯಾಣ ಮಂಟಪ ಲೋಕಾರ್ಪಣೆಯಾಗಿರುವುದು  ಎಲ್ಲ ಸಮುದಾಯದವರಿಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ,  ಅಧ್ಯಕ್ಷ ರಮೇಶ್, ಸದಸ್ಯ ಕೆ.ಸಿ.ನಾಗರಾಜ, ಕೆ.ಎಂ. ಜಗದೀಶ್, ಗಂಗಣ್ಣ, ಪ್ರಮೋದ್, ಸೈಟ್ ಬಾಬಣ್ಣ, ರವಿಕುಮಾರ್, ಮಾತೃಶ್ರೀ ಮಂಜುನಾಥ ಸೇರಿದಂತೆ ಸಮುದಾಯದವರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

error: Content is protected !!