ಬೆಂಗಳೂರು: ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆ ಆ ಸ್ಥಾನವನ್ನ ಬಸವರಾಜ ಬೊಮ್ಮಾಯಿ ಅವರು ಆಡಳಿಯದ ಚುಕ್ಕಾಣಿ ಹಿಡಿದಿದ್ದಾರೆ. ಅಂದಿನಿಂದಲೂ ಅವರ ಅಧಿಕಾರಾವಧಿಯನ್ನ ಸಾಕಷ್ಟು ಜನ ಹೊಗಳಿದ್ದಾರೆ. ಅಷ್ಟೇ ಅಲ್ಲ ಹೈಕಮಾಂಡ್ ನಿಂದಲೂ ಶಬ್ಬಾಶ್ ಗಿರಿ ಸಿಕ್ಕಿದೆ.
ಮತ್ತೆ ಸಿಎಂ ಬದಲಾಗ್ತಾರೆ ಅನ್ನೋ ಊಹಾಪೋಹಕ್ಕೂ ಹೈಕಮಾಂಡ್ ಫುಲ್ ಸ್ಟಾಪ್ ಇಟ್ಟಿತ್ತು. ಮುಂದಿನ ಚುನಾವಣೆ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯಲಿದೆ ಅಂತ ಹೇಳಿದ್ರು. ಇದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಡಳಿತ ನಡೆಸುತ್ತಿರುವ ಪರಿಗೆ ಹಿಡಿದ ಕೈಗನ್ನಡಿ.
ಇದೀಗ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬೊಮ್ಮಾಯಿ ಅವರ ಸರ್ಕಾರ ಉತ್ತಮ ವಾಗಿ ಕೆಲಸ ಮಾಡುತ್ತಿದೆ. ಅವರ ಯೋಜನೆಗಳ ಮೇಲೆ ಮುಂದಿನ ಉಪಚುನವಾಣೆಗೆ ಕೆಲಸ ಮಾಡುತ್ತೇವೆ. ಜೊತೆಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಕೆಲಸ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸುತ್ತೇವೆ ಎಂದಿದ್ದಾರೆ.