Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ್ ಬೊಮ್ಮಾಯಿ : ಕ್ಷೇತ್ರದ ಜನರ ಬಗ್ಗೆ ಹೇಳಿದ್ದೇನು..?

---Advertisement---

 

 

ಹಾವೇರಿ : ಬಸವರಾಜ್ ಬೊಮ್ಮಾಯಿ ಅವರು ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ವಿಜಯ ಸಾಧಿಸಿದ್ದಾರೆ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಹೀಗಾಗಿ ಅವರು ಶಾಸಕರಾಗಿದ್ದ ಶಿಗ್ಗಾವಿ ಕ್ಷೇತ್ರ ತೆರವಾಗಿದೆ. ಅದಕ್ಕೆ ಉಪಚುನಾವಣೆಗೂ ಸಿದ್ಧತೆ ನಡೆಯುತ್ತಿದೆ. ಇದೀಗ ಶಿಗ್ಗಾವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಹಾವೇರಿ ಗದಗ ಕ್ಷೇತ್ರದ ಸಂಸದನಾಗಿದ್ದು, ಈ ಕ್ಷೇತ್ರದ ಅಭಿವೃದ್ಧಿ ಹಾಗೂ ನಿಮ್ಮ ವೈಯಕ್ತಿಕ ಕೆಲಸಗಳನ್ನು ಮಾಡಲು ನಾನು ಸದಾ ಸಿದ್ಧ. ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಈ ಯಾತ್ರೆಗೂ ಯಾವುದೇ ಸಂಬಂಧವಿಲ್ಲ. ಶಿಗ್ಗಾವಿ ಸವಣೂರು ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಲು ಈ ಯಾತ್ರೆ ಆರಂಭಿಸಿದ್ದೇನೆ ಎಂದಿದ್ದಾರೆ.

ನಮ್ಮ ನಿಮ್ಮ ನಡುವೆ ಈ ಯಾತ್ರೆಯನ್ನು ಗಟ್ಟಿಗೊಳಿಸುವುದಕ್ಜೆ ಈ ಯಾತ್ರೆಯನ್ನು ಮಾಡುತ್ತಿದ್ದೇವೆ. ನಾನು ಶಾಸಕನಾಗಿಯೇ ನಿಮ್ಮ ಸೇವೆ ಮಾಡಬೇಕು ಎಂದೇನಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಶಾಸಕ ಅಲ್ಲದೆ ಇದ್ದರು ನಿಮ್ಮ ಸೇವೆ ಮಾಡುವುದಕ್ಕೆ ಅದಕ್ಕಿಂತ ಹೆಚ್ಚಿನ ಶಕ್ತಿಯನ್ನು ಹೊಂದಿದ್ದೇನೆ. ಇವತ್ತು ಬಹಳ ದೊಡ್ಡ ಪ್ರಮಾಣದ ಅಭಿವೃದ್ಧಿಯಾಗಬೇಕೆಂಬ ಪರಿಕಲ್ಪನೆ ನನ್ನದಾಗಿತ್ತು. ವಾಣಿಜ್ಯಕವಾಗಿ, ಶೈಕ್ಷಣಿಕವಾಗಿ ತಡಸ ಗ್ರಾಮ ಅಭಿವೃದ್ಧಿಯಾಗಬೇಕೆಂಬ ಆಸೆ ನನ್ನದು. ಪ್ರತಿಬಾರಿ ಮತ ಎಣಿಕೆ ನಡೆಯುವುದು ತಡಸ್ ಹಾಗೂ ಮುತ್ತಳ್ಳಿಯಲ್ಲಿ. ಈ ಗ್ರಾಮದ ಜನ ಬರೀ ಮತವನ್ನಲ್ಲ ಆತ್ಮಸ್ಥೈರ್ಯವನ್ನು ನೀಡಿದ್ದಾರೆ ಎಂದು ತಮ್ಮ ಗ್ರಾಮದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment