ಹೈಫೈ ಜೀವನದಲ್ಲಿ ಬೆಳೆದ ಪ್ರಿಯಾಂಕ್ ಖರ್ಗೆ ಜೊಲ್ಲು ಸುರಿಸುವುದರಲ್ಲಿ ನಿಸ್ಸೀಮರು : ಸಚಿವ ಬಿ ಸಿ ಪಾಟೀಲ್

1 Min Read

 

 

ಧಾರವಾಡ: ಬಿಜೆಪಿ ಜೊಲ್ಲು ಸುರಿಸುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಬಿ ಸಿ ಪಾಟೀಲ್ ಹೈಫೈ ಜೀವನ ಸಾಗಿಸಿದವರು ಅವರು. ವಾಸ್ತವಾಂಶದ ಅರಿವಿಲ್ಲದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಗೊತ್ತಿದೆ. ಅವರು ಜೊಲ್ಲು ಸುರಿಸುವುದರಲ್ಲಿ ನಿಸ್ಸೀಮರು. ಅವರಿಗೆ ರೈತರ ಬಗ್ಗೆ ಕಾಳಜಿಯೂ ಇಲ್ಲ. ಈ ಹಿಂದೆಯೂ ಹೆಣ್ಣು ಮಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದರು, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಹೈಫೈ ಜೀವನ ಮಾಡಿದವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದಿದ್ದಾರೆ.

ಇನ್ನು ಸಿಎಂ ಟೀಕಿಸಿದ್ದ ಬಗ್ಗೆ ಮಾತನಾಡಿದ್ದು, ಬೊಮ್ಮಾಯಿ ಅವರೇನು ದಡ್ಡರಲ್ಲ, ಚಾಣಾಕ್ಷರಿದ್ದಾರೆ. ಅವರಿಗೆ ಯಾವುದೇ ಕಾರ್ಯಕ್ರಮವನ್ನು ನಿಭಾಯಿಸುವ ಶಕ್ತಿ ಇದೆ. ಭಾಷಣ ಮಾಡುವುದು ಗೊತ್ತಿದೆ. ಪ್ರಿಯಾಂಕ್ ಖರ್ಗೆಯಿಂದ ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದಿದ್ದಾರೆ‌.

Share This Article
Leave a Comment

Leave a Reply

Your email address will not be published. Required fields are marked *