Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

Facebook
Twitter
Telegram
WhatsApp

 

ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್ ಗೆ ಅರ್ಜಿ ಆಹ್ವಾನಿಸಿದೆ. ರಾಹುಲ್ ದ್ರಾವಿಡ್ ಅವರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಜೈ ಶಾ ಹೇಳಿದ್ದರು.

ಮುಖ್ಯ ಕೋಚ್ ಗೆ ಬಿಸಿಸಿಐ ಸೋಮವಾರ ಅರ್ಜಿ ಆಹ್ವಾನಿಸಿದೆ. ಮೇ 27ರ ಸೋಮವಾರ ಸಂಜೆ 6 ಗಂಟೆಯ ಒಳಗೆ ಆಕಾಂಕ್ಷಿತರು ಅರ್ಜಿ ಸಲ್ಲಿಕೆ ಮಾಡಬಹುದು. ಕೋಚ್ ಗಳ ಆಯ್ಕೆ ಪ್ರಕ್ರಿಯೆ ಯು ಅರ್ಜಿಗಳ ಪರಿಶೀಲನೆಯ ಮೂಲಕ ನಡೆಯುತ್ತದೆ. ನಂತರ ವೈಯಕ್ತಿಕ ಸಂದರ್ಶನ ಮತ್ತು ಶಾರ್ಟ್ ಲೀಸ್ಟ್ ಮೂಲಕ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಲಾಗುತ್ತದೆ. ಟೀಂ ಇಂಡಿಯಾದ ಮುಖ್ಯ ಕೋಚ್ ನ ಅಧಿಕಾರಾವಧಿ ಜುಲೈ 1, 2024 ರಿಂದ ಪ್ರಾರಂಭವಾಗಿ ಡಿಸೆಂಬರ್ 31, 2027ರ ವರೆಗೆ ಮುಂದುವರೆಯಲಿದೆ.

ಮುಖ್ಯ ಕೋಚ್ ಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಹಾಕುವವರಿಗೆ ಕೆಲವೊಂದಿಷ್ಟು ಅರ್ಹತೆಗಳು ಇರಬೇಕಾಗಿರುತ್ತದೆ. ಆ ಅರ್ಹತೆಗಳ ಲೀಸ್ಟ್ ಇಲ್ಲಿದೆ.

* ಕನಿಷ್ಠ 30 ಟೆಸ್ಟ್ ಅಥವಾ 50 ODI ಪಂದ್ಯಗಳನ್ನು ಆಡಿದ ಅನುಭವ ಇರಬೇಕು.

* ಟೆಸ್ಟ್ ಪಂದ್ಯವನ್ನಾಡುವ ಯಾವುದಾದರೂ ಒಂದು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಕನಿಷ್ಠ ಎರಡು ವರ್ಷ ಕೆಲಸ ಮಾಡಿರಬೇಕು.

*ಕನಿಷ್ಠ ಮೂರು ವರ್ಷಗಳ ಕಾಲ ಐಪಿಎಲ್ ಅಥವಾ ಅದಕ್ಕೆ ಸಮಾನವಾದ ಇಂಟರ್ನ್ಯಾಷನಲ್ ಲೀಗ್ ಅಥವಾ ಪ್ರಥಮ ದರ್ಜೆ ತಂಡ ಅಥವಾ ರಾಷ್ಟ್ರೀಯ ಎ ತಂಡದ ಸಹಾಯಕ ಸದಸ್ಯ ಅಥವಾ ಮುಖ್ಯ ಕೋಚ್ ಆಗಿ ಕೆಲಸ ಮಾಡಿರಬೇಕು.

* ವಯಸ್ಸು 60 ವರ್ಷಕ್ಕಿಂತ ಕಡಿಮೆ ಇರಬೇಕು

ಈ ಅರ್ಹತೆಗಳು ಇರುವವರು ಬಿಸಿಸಿಐಗೆ ಅರ್ಜಿ ಸಲ್ಲಿಸಬಹುದು. ಕೆಲವೊಂದು ಸುತ್ತುಗಳ ಮೂಲಕ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

error: Content is protected !!