ಕಳೆದ ಬಾರಿಯಂತೆ ರಣಜಿ ಕೂಟವನ್ನ ರದ್ದುಗೊಳಿಸುವುದಿಲ್ಲ : ಬಿಸಿಸಿಐ ಅಧ್ಯಕ್ಷ ಹೇಳಿದ್ದೇನು..?

suddionenews
1 Min Read

ಸದ್ಯವೆಲ್ಲೆಡೆ ಕೊರೊನಾ ಮತ್ತೆ ಹೆಚ್ಚಳವಾಗುತ್ತಿದ್ದು, ಇದು ಕ್ರಿಕೆಟ್ ಆಟದ ಮೇಲೂ ಪರಿಣಾಮ ಬೀರುತ್ತಿದೆ. ಈಗಾಗಲೇ ಎಲ್ಲಾ ರಾಜ್ಯ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಸೂಚನೆ ನೀಡಿದೆ. ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ದೇಶಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜಿಸಲಾಗುವುದು ಎಂದಿದೆ. ಈ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಳೆದ ಬಾರಿಯಂತೆ ಈ ಬಾರಿ ಕೂಟವನ್ನ ಎದ್ದುಗೊಳಿಸಲ್ಲ ಎಂದು ಭರವಸೆಯನ್ನು ನೀಡಿದ್ದಾರೆ.

ಕೊರಿನಾ ಹೆಚ್ಚಳದ ಹಿನ್ನೆಲೆ ಸದ್ಯದ ಮಟ್ಟಿಗೆ ರಣಜಿ ಕೂಟವನ್ನ ಮುಂದುವರೆಸಿದ್ದಾರೆ. ಇದು ಆಟಗಾರರ ಆರೋಗ್ಯದ ದೃಷ್ಟಿಯಿಂದ ಎಂಬುದನ್ನು ಈಗಾಗಲೇ ತಿಳಿಸಲಾಗಿದೆ. ಆದ್ರೆ ಕ್ರಿಕೆಟ್ ಅಭಿಮಾನಿಗಳಿಗೆಲ್ಲಾ ಮತ್ತೆ ಇನ್ನೆಲ್ಲಿ ರಣಜಿ ಕೂಟ ಈ ಬಾರಿಯೂ ರದ್ದಾಗುತ್ತೋ ಅನ್ನೋ ಬೇಸರವಿತ್ತು. ಆದ್ರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೀಡಿರುವ ಭರವಸೆ ಎಲ್ಲರಿಗೂ ಸಂತಸ ತಂದಿದೆ.

ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಖಂಡಿತ ಕೂಟವನ್ನು ನಡೆಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂಬ ಭರವಸೆಯನ್ನ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *