Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೆಲವೊಬ್ಬರ ದೇಹಕ್ಕೆ ಈ ಆಹಾರಗಳೇ ಗ್ಯಾಸ್ಟ್ರಿಕ್‌ ಸಮಸ್ಯೆಯನ್ನುಂಟು ಮಾಡುತ್ತವೆ ಎಚ್ಚರ..!

---Advertisement---

 

ಗ್ಯಾಸ್ಟ್ರಿಕ್‌ ಸಮಸ್ಯೆ ಅನ್ನೋದು ಈಗ ಎಲ್ಲರ ಪಾಲಿಗೆ ಕೊಂಚ ಹೆಚ್ಚೆ ಯಮಧೂತವಾಗಿ ಕಾಡುವುದಕ್ಕೆ ಶುರುವಾಗಿದೆ. ಅದಕ್ಕೆ ಕಾರಣ ಹಲವು‌. ಕೆಲವೊಂದಿಷ್ಟು ಮಂದಿ ಹೊರಗಡೆಯ ಊಟಕ್ಕೆ ಬಹಳ ಅಡಿಕ್ಟ್ ಆಗಿರುತ್ತಾರೆ. ಹೀಗಾಗಿ ಸೋಡಾ ಜಾಸ್ತಿಯಾದಾಗಲೂ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಡುವುದಕ್ಕೆ ಶುರುವಾಗುತ್ತದೆ. ಇನ್ನು ಕೆಲವರಿಗೆ ಆಹಾರ ಪದಾರ್ಥಗಳಿಂದಾನೂ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಡುವುದಕ್ಕೆ ಶುರುವಾಗುತ್ತದೆ.

ಗ್ಯಾಸ್ಟ್ರಿಕ್‌ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತದ್ದೇ ಅಲ್ಲ. ನಿರ್ಲಕ್ಷ್ಯ ಮಾಡಬಾರದು ಕೂಡ. ಹೀಗಾಗಿ ಯಾವೆಲ್ಲಾ ಆಹಾರ ಪದಾರ್ಥ ತಿನ್ನುವುದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಡುತ್ತದೆ ಎಂಬುದನ್ನು ಮುಂದೆ ತಿಳಿಯಿರಿ.

ಕೆಲವೊಂದಿಷ್ಟು ಜನರಿಗೆ ಪಾಪ್ ಕಾರ್ನ್ ಆಗಿ ಬರಲ್ಲ. ಪಾಪ್ ಕಾರ್ನ್ ತಿಂದರೆ ಹಿಂದೆಯೇ ಗ್ಯಾಸ್ಟ್ರಿಕ್‌ ಸಮಸ್ಯೆ ಕೂಡ ಕಾಡುತ್ತದೆ. ಹೀಗಾಗಿ ಅಂತವರು ಪಾಪ್ ಕಾರ್ನ್ ನಿಂದ ದೂರ ಇರುವುದು ಉತ್ತಮ.

ಸಲಾಡ್ ತಿನ್ನುವುದು ಆರೋಗ್ಯಕ್ಕೆ ಉತ್ತಮ. ಅದು ಪ್ರೂಟ್ಸ್ ಸಲಾಡ್ ಆದರೆ ಮಾತ್ರ. ತರಕಾರಿಯಲ್ಲೂ ಸಲಾಡ್ ಬೆಸ್ಟ್. ಆದರೆ ಕೆಲವೊಂದು ತರಕಾರಿಯನ್ನು ಹಸಿ ಹಸಿಯಾಗಿ ತಿನ್ನುವುದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗುತ್ತದೆ. ಅದರಲ್ಲೂ ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹೀಗಾಗಿ ಸ್ವಲ್ಪ ಬೇಯಿಸಿದ ತರಕಾರಿಯನ್ನೇ ತಿನ್ನಿ.

ಇನ್ನು ಚ್ಯುಯಿಂಗ್ ಗಮ್. ಇದನ್ನ ಕೆಲವರು ಹೇಗೆ ಅಭ್ಯಾಸ ಮಾಡಿಕೊಂಡಿರುತ್ತಾರೆ ಎಂದರೆ, ಯಾವಾಗಲೂ ಜಗಿಯುತ್ತಾ ಇರುತ್ತಾರೆ‌. ಚ್ಯೂಯಿಂಗ್ ಗಮ್ ಜಗಿಯುವುದರಿಂದಾನೆ ಹೊಟ್ಟೆಯಲ್ಲಿ ಗ್ಯಾಸ್ ಕ್ರಿಯೇಟ್ ಆಗುತ್ತದೆ. ಹೀಗಾಗಿ ಗ್ಯಾಸ್ಟ್ರಿಕ್‌ ಸಮಸ್ಯೆಯೂ ಉಲ್ಭಣವಾಗುತ್ತದೆ. ಚ್ಯೂಯಿಂಗ್ ಗಮ್ ಜಗಿಯುವ ಅಭ್ಯಾಸವಿದ್ದರೆ, ಆದಷ್ಟು ಬಿಟ್ಟು ಬಿಡುವುದು ಉತ್ತಮ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...