ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಈ ಹೆದ್ದಾರಿಗಳಲ್ಲಿ ವಾಹನಗಳು ಸರಾಗವಾಗಿ ಸಂಚರಿಸಬಹುದಾದ ಅನುಕೂಲವಿರುವ ಕಾರಣ ಕೆಲವು ಪುಂಡರು ಹೆದ್ದಾರಿಗಳಲ್ಲಿ ತಮ್ಮದೇ ಆಟಾಟೋಪಗಳನ್ನು ಮಾಡುತ್ತಿರುತ್ತಾರೆ. ಆದ್ರೆ ಇಂಥ ಆಟಾಟೋಪಗಳಿಗೆ ಬ್ರೇಕ್ ಹಾಕುವುದಕ್ಕೆ ದಾವಣಗೆರೆ ಹೆದ್ದಾರಿ ಪ್ರಾಧಿಕಾರ ಸಿದ್ಧವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರು, ಹೆದ್ದಾರಿಯಲ್ಲಿ ಪಥ ಶಿಸ್ತು ಉಲ್ಲಂಘನೆ ಮಾಡಿದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು. ಈ ಹೊಸ ನಿಯಮ ಸೋಮವಾರ ಸಂಜೆಯಿಂದಾನೇ ಜಾರಿಗೆ ಬರಲಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ಹಾದು ಹೋಗಿದೆ. ದಾವಣಗೆರೆಯ ಹೆದ್ದಾರಿಯಲ್ಲಿ ಸಂಜೆಯಿಂದ ಪೈಲೆಟ್ ಪ್ರಾಜೆಕ್ಟ್ ಆರಂಭವಾಗಿದೆ.
ಈ ಯೋಜಬೆಯ ಉದ್ದೇಶವೇ ಹೆದ್ದಾರಿಯಲ್ಲಿ ಸಂಭವಿಸುವ ದುರಂತಕ್ಕೆ ಕಡಿವಾಣ ಹಾಕಬೇಕು. ಪಥ ಶಿಸ್ತು ಎಂಬ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಆರು ಪಥ ಮಾಡಲಾಗಿದೆ. ಅತಿ ವೇಗವಾಗಿ ಹೋಗುವ ವಾಹನಗಳಿಗೆ ಒಳ ಪಥವನ್ನು ನಿಗದಿ ಮಾಡಲಾಗಿದೆ. ಈ ಲೈನ್ ನಲ್ಲಿ ಬಾರೀ ವಾಹನಗಳು ಹೋಗುವಂತಿಲ್ಲ. ಬಾರೀ ವಾಹನಗಳಿಗೆ ಎರಡನೇ ಲೈನ್ ಇರುತ್ತದೆ. ಈ ನಿಯಮ ಉಲ್ಲಂಘಿಸಿದವರಿಗೆ 500 ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್