Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಹನಗಳಿಗೆ ಸುರಕ್ಷಿತ ನಂಬರ್ ಪ್ಲೇಟ್ ಹಾಕಿಸುವ ಮುನ್ನ ಎಚ್ಚರ : ವಂಚನೆ ಮಾಡುವ ಜಾಲ ದೊಡ್ಡದಿದೆ..!

Facebook
Twitter
Telegram
WhatsApp

ಬೆಂಗಳೂರು: ಯಾವುದೇ ರೀತಿಯ ಅಪ್ಡೇಟ್ ಆಗಲಿ ಕಡೆ ಗಳಿಗೆಯಲ್ಲಿಯೇ ಎಲ್ಲರೂ ಓಡಾಡುವುದು. ಇದೀಗ ಅಂಥದ್ದೇ ಟೆನ್ಶನ್ ವಾಹನ ಮಾಲೀಕರಿಗೆ ಸೃಷ್ಟಿಯಾಗಿದೆ. ತಮ್ಮ ತಮ್ಮ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ (HSRP) ಹಾಕಿಸಬೇಕಾಗಿದೆ. ಅದಕ್ಕೆ ಐದು ದಿನಗಳು ಮಾತ್ರ ಸಮಯವಿದೆ. ಈ ಐದು ದಿನಗಳ ಒಳಗೆ ನಂಬರ್ ಪ್ಲೇಟ್ ಹಾಕಿಸಬೇಕಾಗಿದೆ. ವಂಚನೆ ಮಾಡುವವರು ದಾರಿಗಳನ್ನು ಹುಡುಕುತ್ತಲೇ ಇರುತ್ತಾರೆ. ಇದೀಗ ನಂಬರ್ ಪ್ಲೇಟ್ ವಿಚಾರವನ್ನೇ ಬಂಡವಾಳವಾಗಿಸಿಕೊಂಡಿದ್ದಾರೆ. ಈ ಮೂಲಕ ವಂಚನೆ ಮಾಡುವವರ ಸಂಖ್ಯೆ ಜಾಸ್ತಿಯಾಗುತ್ತಿದೆ.

 

ಫೆಬ್ರವರಿ 17ರ ಒಳಗೆ ಈ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅನ್ನು ಹಾಕಿಸಬೇಕಾಗುತ್ತದೆ. ಇಲ್ಲವಾದರೇ ಭಾರೀ ಮೊತ್ತದೆ ದಂಡ ಬೀಳಲಿದೆ. ಹೀಗಾಗಿ ವಾಹನ ಸವಾರರು ಎದ್ದು ಬಿದ್ದು ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಆನ್ಲೈನ್ ಮೂಲಕ ರಿಜಿಸ್ಟರ್ ಮಾಡಿಸಿಕೊಳ್ಳುತ್ತಿದ್ದಾರೆ. ಇದು ವಂಚನೆ ಕೋರರಿಗೆ ಬಹಳ ಸುಲಭದ ಮಾರ್ಗವಾಗಿ ಬಿಟ್ಟಿದೆ. ಹಿರಿಯ ನಾಗರಿಕರನ್ನು ಆನ್ಲೈನ್ ನಲ್ಲಿ ವಂಚಿಸುತ್ತಿರುವ ಪ್ರಕರಣಗಳು ಬಯಲಿಗೆ ಬಂದಿವೆ.

 

ಹಿರಿಯ ನಾಗರಿಕರು ಅಂತ ಅಲ್ಲ ಯುವಕರನ್ನು ಯಾಮಾರಿಸುವುದು ವಂಚಕರಿಗೇನು ಕಷ್ಟವಲ್ಲ. ಹೀಗಾಗಿ ವಂಚನೆಗೆ ಒಳಗಾಗಬಾರದು ಎಂದರೆ ಎಚ್ಚರದಿಂದ ಇರುವುದು ಬಹಳ ಒಳ್ಳೆಯದು. ಎಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ವಿಚಾರಕ್ಕೆ ಯಾರಾದರೂ ನಿಮಗೆ ಕಾಲ್ ಮಾಡಿ, ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ಕೇಳುವುದು. ಅಥವಾ ನಿಮ್ಮ ಕ್ರೆಡಿಟ್ ಕಾರ್ಡ್ ಬಗ್ಗೆ ಇಲ್ಲವೇ ಎಟಿಎಂ ಕಾರ್ಡ್ ಬಗ್ಗೆ ಮಾಹಿತಿ ಕೇಳಿದರೆ ಕೊಡಬೇಡಿ. ಹಾಗೇ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ಅಂದ್ರೆ ಒನ್ ಟೈಂ ಪಾಸ್‌ವರ್ಡ್ ಕೊಡಲು ಹೋಗಲೇಬೇಡಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!