Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಚ್ಛ ಹಾಗೂ ಸುಂದರ ಚಿತ್ರದುರ್ಗ ನಗರ ನಿರ್ಮಾಣಕ್ಕೆ ಪಣತೊಡಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ. ಫೆ.07:   ಸ್ವಚ್ಛ ಹಾಗೂ ಸುಂದರ ಚಿತ್ರದುರ್ಗ ನಗರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಗರಸಭೆ ಸಿಬ್ಬಂದಿ, ನೌಕರರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಚಿತ್ರದುರ್ಗ ನಗರಸಭೆ ವತಿಯಿಂದ ನಗರಸಭೆ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರಿಂದ ಪೌರಾಯುಕ್ತರವರೆಗೂ ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಭಾವಿಸಿ, ಕೆಲಸ ಮಾಡಿದಾಗ ಮಾತ್ರ ನಗರಕ್ಕೆ ಹಾಗೂ ನಾಗರಿಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಲಿದ್ದು, ಅಂತಹ ನಗರ ಸುಂದರ ನಗರವನ್ನಾಗಿ ಕಾಣಲು ಸಾಧ್ಯವಾಗಲಿದೆ. ನಗರದ ತೇರು ಎಳೆಯಲು ನಗರಸಭೆ ಸಿಬ್ಬಂದಿಗಳು, ನೌಕರರೆಲ್ಲರೂ ಸಾರಥಿಗಳಾಗಬೇಕು.  ನಗರಸಭೆ ಸಿಬ್ಬಂದಿಗಳು, ನೌಕರರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕಂದಾಯ ಇಲಾಖೆ ಹಾಗೂ ನಗರಸಭೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಮನೆ ಸೇರಿದಂತೆ ಮೂಲಸೌಕರ್ಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.  ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುವ ನೌಕರರು ಹಾಗೂ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ನೌಕರರು ಸಮನ್ವಯತೆಯಿಂದ ತಾವುಗಳು ಕಾರ್ಯನಿರ್ವಹಿಸಿದಲ್ಲಿ ನಗರವನ್ನು ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ನಗರಸಭೆ ಮೂಲಭೂತ ಸೌಕರ್ಯಗಳನ್ನು ನಾಗರಿಕರಿಗೆ ಕೊಡುವ ಜವಾಬ್ದಾರಿ ಹೊತ್ತ ಸಂಸ್ಥೆಯಾಗಿದೆ. ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಈಚೆಗೆ ಜರುಗಿದ ಅಹಿತಕರ ಪ್ರಕರಣದಿಂದಾಗಿ ರಾಜ್ಯದ ಎಲ್ಲ ನಗರಸ್ಥಳೀಯ ಸಂಸ್ಥೆಗಳು ಎಚ್ಚೆತ್ತು ಜನರಿಗೆ ಶುದ್ಧವಾದ ಕುಡಿಯುವ ನೀರು ಪೂರೈಕೆ, ಜಲಸಂಗ್ರಹಾರಗಳ ಸ್ವಚ್ಛತೆ ಸೇರಿದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಕ್ರಮ ವಹಿಸಲಾಗಿದೆ,  ಅಧಿಕಾರಿ, ಸಿಬ್ಬಂದಿಗಳು ಮುಂಜಾಗ್ರತಾ ಕ್ರಮ ವಹಿಸಿದಲ್ಲಿ, ಇಂತಹ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಬಹುದು ಎಂದು ತಿಳಿಸಿದ ಅವರು,  ಮುಂದಿನ ದಿನಗಳಲ್ಲಿ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಚಿತ್ರದುರ್ಗ ನಗರವೂ ಸ್ಥಾನ ಪಡೆಯುವಂತೆ ಪಣತೊಡಬೇಕು ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ನಗರಸಭೆ ಸಿಬ್ಬಂದಿ, ನೌಕರರಿಗೆ ಜ್ಞಾನ, ಕೌಶಲ್ಯ, ಕಾರ್ಯದಕ್ಷತೆ ಮತ್ತು ಮನೋಭಾವದಲ್ಲಿನ ಬದಲಾವಣೆ ಹಾಗೂ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉತ್ತೇಜಿಸುವ ಬಗ್ಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿರುವುದು ಉತ್ತಮ ನಡೆಯಾಗಿದ್ದು, ಇದು ಅತ್ಯಗತ್ಯವಾಗಿ ಬೇಕಾಗಿದೆ ಎಂದು ಹೇಳಿದರು.

ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ನಗರಸಭೆ ಸಿಬ್ಬಂದಿಗಳು ತಮಗೆ ವಹಿಸಿದ ಕೆಲಸವನ್ನು ಶ್ರದ್ಧೆ ಹಾಗೂ ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಬೇಕು. ಸಿಬ್ಬಂದಿಗಳು ತಮಗೆ ವಹಿಸಿದ ಕೆಲಸವನ್ನು ಅತೀ ತುರ್ತಾಗಿ, ಕಾಳಜಿಯಿಂದ ನಿರ್ವಹಿಸಿದರೆ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರರಾಗತ್ತಾರೆ. ನಗರದ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ನಿಗಧಿತ ಸಮಯಕ್ಕೆ, ಸಮರ್ಪಕವಾಗಿ ಒದಗಿಸಬೇಕು ಎಂದು ತಿಳಿಸಿದರು.

ಚಿತ್ರದುರ್ಗ ನಗರಸಭೆಯ ಎಲ್ಲಾ ವಿಭಾಗಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಸಿಬ್ಬಂದಿಯು ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಇಂಟರ್ ನ್ಯಾಷನಲ್ ಮೋಟಿವೇಟರ್ ಬೆಂಗಳೂರಿನ  ಡಾ.ಬಿ.ಎಸ್. ಗುರುದಕ್ಷಿಣ್ ಅವರು ಕಚೇರಿ ನಿರ್ವಹಣೆಯಲ್ಲಿ ಸಿಬ್ಬಂದಿಗಳ ಪಾತ್ರ, ಸಾರ್ವಜನಿಕರೊಂದಿಗೆ ಸಂವಹನ ಮತ್ತು ಒತ್ತಡ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಮೈಸೂರು ಎಟಿಐ  ನಿವೃತ್ತ ತರಬೇತಿ ಸಂಯೋಜಕ ಜಿ.ಎಂ.ಸರ್ವೇಶ್ ಅವರು ನೀರಿನ ನಿರ್ವಹಣೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಉಪನ್ಯಾಸ ನೀಡಿದದರು.

ಕಾರ್ಯಕ್ರಮದಲ್ಲಿ ನಗರಸಭೆ ವ್ಯವಸ್ಥಾಪಕಿ ಮಂಜುಳಾ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!