Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಪ್ಟೆಂಬರ್ 5 ರಂದು ಬಿ.ಇ.ಓ.ಕಚೇರಿಯ ಮುಂದೆ ಬೀರಪ್ಪ ಅಂಡಗಿ ಚಿಲವಾಡಗಿ ಅನಿರ್ದಿಷ್ಟಾವಧಿ ಧರಣಿ

Facebook
Twitter
Telegram
WhatsApp

ಕೊಪ್ಪಳ : ತಮ್ಮ ಮೇಲಿನ ದೂರಿಗೆ ಸಂಬಂಧಿಸಿದಂತೆ ಲಿಖಿತ ಉತ್ತರ ನೀಡಲು ವಿಳಂಭ ಧೋರಣೆಯನ್ನು ಅನುಸರಿಸುತ್ತಿರುವ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ದ ಸೆಪ್ಟೆಂಬರ್ 5 ರ ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಬೆಳಗ್ಗೆ 11 ಗಂಟೆಯಿಂದ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ವಿಷದ ಬಾಟಲಿಯೊಂದಿಗೆ ಅನಿರ್ದಿಷ್ಟ ಅವಧಿವರೆಗೆ  ಧರಣಿ ನಡೆಸಲಿದ್ದಾರೆ.

ಬೀರಪ್ಪ ಅಂಡಗಿ ಚಿಲವಾಡಗಿ ಅವರು,ತಮ್ಮ ಮೇಲೆ‌ ಆಧಾರ ಹಾಗೂ ಸಾಕ್ಷಿ ರಹಿತವಾದ ದೂರನ್ನು ನೀಡಲಾಗಿತ್ತು.ಆ ದೂರಿಗೆ ಸಂಬಂಧಿಸಿದಂತೆ ಬಿ.ಇ.ಓ.ಅವರೇ ನೇಮಕ ‌ಮಾಡಿದ ಅಧಿಕಾರಿಗಳು ಕಳೆದ ಫೆಬ್ರವರಿ ತಿಂಗಳಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ವರದಿಯನ್ನು ಸಲ್ಲಿಸಿದ್ದಾರೆ.

ವರದಿಯನ್ನು ಆಧರಿಸಿ ತಪ್ಪು ಮಾಡಿದ್ದರೆ ನನ್ನ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ದೂರಿಗೆ ಸಂಬಂಧಿಸಿದಂತೆ ಲಿಖಿತ ಉತ್ತರ ನೀಡುವಂತೆ ಈಗಾಗಲೇ ಅನೇಕ ಬಾರಿ ಕಚೇರಿಗೆ ಲಿಖಿತ ಪತ್ರ ನೀಡುವುದರ ಜೊತೆಯಲ್ಲಿ ಕಚೇರಿಯ ಮುಂದೆ ಧರಣಿ ಕೂಡಾ ಮಾಡಲಾಗಿದ್ದರೂ ಕೂಡಾ ಅಧಿಕಾರಿಗಳು ಮಾತ್ರ ವರದಿ ನೀಡಿಲ್ಲ.ಯಾರದ್ದೂ ಒತ್ತಡಕ್ಕೆ ಮಣಿದು ಲಿಖಿತ ಉತ್ತರ ನೀಡಲು ವಿಳಂಭ ಮಾಡುತ್ತಿದ್ದಾರೆ.ಅಲ್ಲದೇ ವಿಕಲಚೇತನಾಗಿರುವುದರಿಂದ ಈ ರೀತಿಯಲ್ಲಿ ಅವಮಾನ ಮಾಡಬೇಕು ಎಂಬ ಉದ್ದೇಶವನ್ನು ಹೊಂದಿರಬಹುದು ಎಂಬುದು ಬೀರಪ್ಪ ಅಂಡಗಿ ಅವರ ವಾದವಾಗಿದೆ.

ಸೆಪ್ಟೆಂಬರ್ 3 ರ ಶನಿವಾರದ ಒಳಗಡೆ ತಮ್ಮ ದೂರಿಗೆ ಸಂಬಂಧಿಸಿದಂತೆ ಲಿಖಿತ ಉತ್ತರವನ್ನು ನೀಡಬೇಕು ಇಲ್ಲದಿದ್ದರೆ ಸೆಪ್ಟೆಂಬರ್ 5 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ವಿಷದ ಬಾಟಲಿಯೊಂದಿಗೆ ಧರಣಿ ನಡೆಸಲಾಗುತ್ತದೆ.

ಒಂದು ವೇಳೆ ಬೀರಪ್ಪ ಅಂಡಗಿ ಅವರ ಜೀವಕ್ಕೆ ತೊಂದರೆ ಆದರೆ ಅದಕ್ಕೆ ನೇರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ.ಧರಣಿಯ ಸಮಯದಲ್ಲಿ ಕೂಡಾ ನ್ಯಾಯ ದೊರೆಯದಿದ್ದ ಪಕ್ಷದಲ್ಲಿ ಅನಿವಾರ್ಯವಾಗಿ ವಿಕಲಚೇತನ ಕಾಯ್ದೆ 2016 ರ ಕಲಂ.92 ರ ಅನ್ವಯ ವಿಶೇಷ ನ್ಯಾಯಾಲಯದಲ್ಲಿ ದೂರನ್ನು ಕೊಡುವ ಬಗ್ಗೆ ಚಿಂತನೆ ನಡೆದಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!