Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೀಟ್ರೂಟ್ ಒಂದೇ ಸಾಕು ನಿಮ್ಮನ್ನ ಕಾಯಿಲೆಗಳಿಂದ ದೂರ ಇಡೋಕೆ..!

---Advertisement---

 

 

ಕೆಲವು ತರಕಾರಿಗಳಲ್ಲಿ ವಿಟಮಿನ್ ಗಳು ಹೆಚ್ಚಾಗಿದ್ದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು ಇರುವುದು. ಹೀಗೆ ನಮ್ಮ ದೇಹಕ್ಕೆ ಬೇಕಾಗಿರುವಂತಹ ಸಂಪೂರ್ಣ ಪೋಷಕಾಂಶಗಳು ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್. ಬೀಟ್ರೂಟ್ ನಲ್ಲಿ ಹಲವು ಪೌಷ್ಠಿಕಾಂಶಗಳು ಇರುತ್ತವೆ. ಬೀಟ್ರೂಟ್ ಒಂದು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ, ಇದು ಜೀವಸತ್ವಗಳು ಮತ್ತು ಖನಿಜಗಳ ಒಂದು ಶ್ರೇಣಿಯನ್ನು ಹೊಂದಿದೆ. ಇದು ಫೋಲೇಟ್, ವಿಟಮಿನ್ ಸಿ ಮತ್ತು ಡಯೆಟರಿ ಫೈಬರ್‌ನ ಅತ್ಯುತ್ತಮ ಮೂಲವಾಗಿದೆ. ಬೀಟ್ರೂಟ್ ಪೊಟ್ಯಾಸಿಯಮ್, ಕಬ್ಬಿಣ ಮತ್ತು ಬೆಟಾಲೈನ್ಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.

ಬೀಟ್‌ರೂಟ್‌ನಲ್ಲಿರುವ ನೈಟ್ರೇಟ್‌ಗಳು ರಕ್ತದ ಹರಿವು ಮತ್ತು ಸ್ನಾಯುಗಳಿಗೆ ಆಮ್ಲಜನಕದ ವಿತರಣೆಯನ್ನು ಹೆಚ್ಚಿಸುತ್ತದೆ. ಬೀಟ್ರೂಟ್ನಲ್ಲಿರುವ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಚರ್ಮದ ಆರೋಗ್ಯಕ್ಕೂ ಒಳ್ಳೆಯದು. ಬೀಟ್ರೂಟ್ ಜ್ಯೂಸ್ ನಿಂದ ಹಲವಾರು ಲಾಭಗಳಿವೆ. ಬೇಯಿಸಿ ತಿನ್ನುವುದಕ್ಕಿಂತ, ಹಾಗೇ ರುಬ್ಬಿ ಕುಡಿಯುವುದರಿಂದ ಲಾಭ ಹೆಚ್ಚು.

 

ಫಾಲಟೆ, ವಿಟಮಿನ್ ಸಿ, ಬೀಟೈನ್, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ತಾಮ್ರ ಮತ್ತು ವಿಟಮಿನ್ ಬಿ6 ಇದೆ. ಹೀಗಾಗಿ ಆ ಎಲ್ಲಾ ಲಾಭಗಳು ಜ್ಯೂಸ್ ನಿಂದ ಸಿಗುತ್ತದೆ. ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಆಯಾಸ ಕಡಿಮೆಯಾಗುತ್ತದೆ‌. ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗಲಿದೆ. ಅದಷ್ಟೇ ಅಲ್ಲ ಯಕೃತ್ ಅದ್ಭುತವಾಗಿ ಕೆಲಸ ಮಾಡುವಂತೆ ಮಾಡುವುದು. ದೇಹದಲ್ಲಿ ಯಕೃತ್ ಶುದ್ಧೀಕರಿಸುವ ಗುಣ ಹೊಂದಿರುವ ಕಾರಣದಿಂದಾಗಿ ಇದು ವಿಷಕಾರಿ ಅಂಶವನ್ನು ಕಡಿಮೆ ಮಾಡುವುದು. ಯಕೃತ್ ನ ಶುದ್ದೀಕರಣವು ಸರಿಯಾಗಿ ಇಲ್ಲದೆ ಇದ್ದರೆ ಅದರಿಂದ ಕಾಯಿಲೆಗಳು ಬರುವುದು. ಇಂತಹ ಸಮಯದಲ್ಲಿ ಬೀಟ್ ರೂಟ್ ಜ್ಯೂಸ್ ಪರಿಣಾಮಕಾರಿ ಆಗಿರುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment