Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಳಿಯನ ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಫೋನ್ ಮಾಡಿ ಮನವಿ ಮಾಡಿದ್ದರಂತೆ ಬಿ.ಸಿ.ಪಾಟೀಲ್..!

Facebook
Twitter
Telegram
WhatsApp

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌನ್ಯ ಅವರ ಪತಿ 41 ವರ್ಷದ ಪ್ರತಾಪ್ ಕುಮಾರ್ ನಿಧನರಾಗಿದ್ದಾರೆ. ವಿಷ ಸೇವಿಸಿದ್ದನ್ನು ಕಂಡವರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದು ತಿಳಿಯುತ್ತಿದ್ದಂತೆ ಬಿ.ಸಿ.ಪಾಟೀಲ್ ಅವರು ಪೊಲೀಸರಿಗೆ ಕರೆ ಮಾಡಿದ್ದರಂತೆ.

ಅಳಿಯ ಆತ್ಮಹತ್ಯೆ ಮಾಡಿಕೊಳ್ಳುತ್ತೀನಿ ಎಂದಾಗಲೇ ಬಿ.ಸಿ ಪಾಟೀಲ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಫೋನ್ ನಂಬರ್ ಹಾಗೂ ಕಾರಿನ ನಂಬರ್ ಅನ್ನು ನೀಡಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದರಂತೆ. ಬಿ.ಸಿ.ಪಾಟೀಲ್ ಅವರ ಮನವಿಯಂತೆ ಕಾರಿನ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ.

ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು. ಪೊಲೀಸರು ಕೂಡ ಟ್ರೇಸ್ ಮಾಡಿದ್ದು, ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಅಷ್ಟರಲ್ಲಿ ವಿಷ ಸೇವಿಸಿ ಕಾರಿನಲ್ಲಿಯೇ ನರಳಾಡುತ್ತಿದ್ದದ್ದು ಪೊಲೀಸರ ಕಣ್ಣಿಗೆ ಕಂಡಿದೆ. ತಕ್ಷಣ ಅವರನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಂತೆ. ಆದರೆ ಹೆಚ್ಚಿನ ಚಿಕಿತ್ಸೆ ಬೇಕೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಗೆ ಬಿಸಿ ಪಾಟೀಲ್ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಇನ್ನು ಶಿವಮೊಗ್ಗದ ಸಂಸದ ಬಿವೈ ರಾಘವೇಂದ್ರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಆಶಾಕಿರಣ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ : ಕಳೆದ 13 ವರ್ಷದಲ್ಲಿ 800 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಸುದ್ದಿಒನ್, ಚಿತ್ರದುರ್ಗ ಅ.06 : ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ನಮ್ಮ ಸಂಸ್ಥೆಯ ಗುರಿಯಾಗಿದೆ. ಇಲ್ಲಿ ಸಹಾಯ ಪಡೆದವರು ಮುಂದಿನ ದಿನದಲ್ಲಿ ಬೇರೆಯವರಿಗೆ ಸಹಾಯವನ್ನು ಮಾಡುವುದರ ಮೂಲಕ ಸಮಾಜದ ಋಣವನ್ನು ತೀರಿಸುವಂತೆ

ಮಹಿಳೆ ಸ್ವಾವಲಂಬಿಯಾಗಿ ಆರ್ಥಿಕವಾಗಿ ಬಲಶಾಲಿಯಾದರೆ ಇಡೀ ಕುಟುಂಬವೆ ಸದೃಢವಾದಂತೆ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಒಂದು ಕಾಲದಲ್ಲಿ ಅಡುಗೆ ಮನೆಗೆ ಮಾತ್ರ ಸೀಮಿತಳಾಗಿದ್ದ ಮಹಿಳೆ ಈಗ ಎಲ್ಲಾ

ಬಿಗ್ ಬಾಸ್ ನಿಂದ ಮೊದಲ ವಾರವೇ ಹೊರ ಬಂದ್ರು ಸ್ಟ್ರಾಂಗ್ ಆಗಿ ಕಾಣಿಸಿಕೊಂಡಿದ್ದ ನಟಿ..!

ಬಿಗ್ ಬಾಸ್ ಸೀಸನ್ 11 ವಾರಕ ಕಥೆ ಕಿಚ್ಚನ ಜೊತೆಗೆ ಅದ್ಭುತವಾಗಿ ನಡೆದಿದೆ. ಇಂದು ಸೂಪರ್ ಸಂಡೇ ವಿತ್ ಸುದೀಪ ಪಂಚಾಯ್ತಿ ನಡೆಯಲಿದ್ದು, ಈ ಪಂಚಾಯ್ತಿಯಲ್ಲಿಯೇ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಮೊದಲ ವಾರಕ್ಕೆ ನಟಿ

error: Content is protected !!