Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಳಿಯನ ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಫೋನ್ ಮಾಡಿ ಮನವಿ ಮಾಡಿದ್ದರಂತೆ ಬಿ.ಸಿ.ಪಾಟೀಲ್..!

---Advertisement---

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌನ್ಯ ಅವರ ಪತಿ 41 ವರ್ಷದ ಪ್ರತಾಪ್ ಕುಮಾರ್ ನಿಧನರಾಗಿದ್ದಾರೆ. ವಿಷ ಸೇವಿಸಿದ್ದನ್ನು ಕಂಡವರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದು ತಿಳಿಯುತ್ತಿದ್ದಂತೆ ಬಿ.ಸಿ.ಪಾಟೀಲ್ ಅವರು ಪೊಲೀಸರಿಗೆ ಕರೆ ಮಾಡಿದ್ದರಂತೆ.

ಅಳಿಯ ಆತ್ಮಹತ್ಯೆ ಮಾಡಿಕೊಳ್ಳುತ್ತೀನಿ ಎಂದಾಗಲೇ ಬಿ.ಸಿ ಪಾಟೀಲ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಫೋನ್ ನಂಬರ್ ಹಾಗೂ ಕಾರಿನ ನಂಬರ್ ಅನ್ನು ನೀಡಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದರಂತೆ. ಬಿ.ಸಿ.ಪಾಟೀಲ್ ಅವರ ಮನವಿಯಂತೆ ಕಾರಿನ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ.

ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು. ಪೊಲೀಸರು ಕೂಡ ಟ್ರೇಸ್ ಮಾಡಿದ್ದು, ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಅಷ್ಟರಲ್ಲಿ ವಿಷ ಸೇವಿಸಿ ಕಾರಿನಲ್ಲಿಯೇ ನರಳಾಡುತ್ತಿದ್ದದ್ದು ಪೊಲೀಸರ ಕಣ್ಣಿಗೆ ಕಂಡಿದೆ. ತಕ್ಷಣ ಅವರನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಂತೆ. ಆದರೆ ಹೆಚ್ಚಿನ ಚಿಕಿತ್ಸೆ ಬೇಕೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಗೆ ಬಿಸಿ ಪಾಟೀಲ್ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಇನ್ನು ಶಿವಮೊಗ್ಗದ ಸಂಸದ ಬಿವೈ ರಾಘವೇಂದ್ರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment