Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಳೆದ ವರ್ಷವೇ ಪ್ರಾಯೋಗಿಕ ಸಂಚಾರವಾಗಿದ್ದರು ಬೆಳಗಾವಿಗ್ಯಾಕೆ ವಂದೇ ಭಾರತ್ ಬಿಟ್ಟಿಲ್ಲ..?

---Advertisement---

ಬೆಳಗಾವಿ: ಕಳೆದ ವರ್ಷ ಅಂದ್ರೆ 2023ರಲ್ಲಿಯೇ ಬೆಳಗಾವಿಯಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿತ್ತು. ಆದರೆ ಆಮೇಲೆ ಅದರ ಸುಳಿವು ಇಲ್ಲ. ಇಲ್ಲಿವರೆಗೂ ಬೆಂಗಳೂರು-ಧಾರವಾಡ-ಹುಬ್ಬಳ್ಳಿ ಮಾರ್ಗದ ವಂದೇಭಾರತ್ ರೈಲು ಸಂಚಾರ ಆರಂಭವಾಗಿಲ್ಲ. ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಯಾವಾಗ ಎಂದು ಜನತೆ ಪ್ರಶ್ನೆ ಮಾಡುತ್ತಿದ್ದಾರೆ.

ಈ ಸಂಬಂಧ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿದ್ದಾರೆ. ಸಚಿವರ ಬಳಿ ವಂದೇ ಭಾರತ್ ರೈಲಿನ ಬಗ್ಗೆ ಹಾಗೂ ಹಲವು ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಪೋಸ್ಟ್ ಒಂದನ್ನು ಹಾಕಿರುವ ಜಗದೀಶ್ ಶೆಟ್ಟರ್, ಬೆಳಗಾವಿ-ಕಿತ್ತೂರು-ಧಾರವಾಡ ನೇರ ರೈಲು ಮಾರ್ಗಕ್ಕೆ ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ತುರ್ತಾಗಿ ಅನುಷ್ಠಾನದ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

 

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಯೊಂದಿಗೆ ಬೆಳಗಾವಿ ನಗರವು ಶೈಕ್ಷಣಿಕವಾಗಿ ಮುಂದುವರೆದಿದೆ. ಇಂಜಿನಿಯರಿಂಗ್ ಕಾಲೇಜುಗಳು, ವೈದ್ಯಕೀಯ ಮತ್ತು ದಂತ ಕಾಲೇಜುಗಳು ಮತ್ತು ಏಷ್ಯಾದ ಅತಿದೊಡ್ಡ ಮತ್ತು ಪ್ರತಿಷ್ಠಿತ ಕೆಎಲ್ಇ ಆಸ್ಪತ್ರೆ ನಗರದಲ್ಲಿದೆ. ಬೆಳಗಾವಿ ನಗರವು ಕೈಗಾರಿಕೆಯಲ್ಲಿಯೂ ಮುಂದಿದೆ. ಬೆಳಗಾವಿ ರೈಲು ನಿಲ್ದಾಣವನ್ನು ಅಭಿವೃದ್ಧಿಗೊಳಿಸಲಾಗಿದೆ. ನೂತನ ಸೌಲಭ್ಯಗಳನ್ನು ನಿಲ್ದಾಣ ಹೊಂದಿದ್ದು, ಬೇಡಿಕೆಯ ಆಧಾರದ ಮೇರೆಗೆ ಬೆಳಗಾವಿಯಿಂದ ವಿವಿಧ ಮಾರ್ಗಗಳಲ್ಲಿ ಹೊಸ ರೈಲುಗಳನ್ನು ಪರಿಚಯಿಸಬೇಕು ಎಂದು ಮನವಿ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment