Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ತಂಟೆಗೆ ಬಂದ್ರೆ ಸುಮ್ಮನಿರಲ್ಲ ಅಂತ ಕರವೇ ಕಾರ್ಯಕರ್ತರು ಅಂದ್ರೆ.. ಗಡಿವಿವಾದಕ್ಕೆ ಮಹತ್ವ ಬೇಡ ಅಂತಿದ್ದಾರೆ ಬೆಲ್ಲದ್..!

Facebook
Twitter
Telegram
WhatsApp

 

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಗಡಿನಾಡು ವಿವಾದ ಹೆಚ್ಚಾಗಿದೆ. ಮಹಾರಾಷ್ಟ್ರದ ಎಂಇಎಸ್ ಪುಂಡರು ಬೆಳಗಾವಿ ವಿಚಾರಕ್ಕೆ ಯಾವಾಗಲೂ ಕ್ಯಾತೆ ತೆಗೆಯುತ್ತಲೆ ಇದ್ದಾರೆ. ಮಹಾರಾಷ್ಟ್ರದ ಸಚಿವರು ನಾವೂ ಬೆಳಗಾವಿಗೆ ಬರುತ್ತೀವಿ ಎಂದಿದ್ದರು. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಆ ಭೇಟಿ ಕ್ಯಾನ್ಸಲ್ ಆಗಿದೆ.

ಈ ಬೆನ್ನಲ್ಲೆ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಗಡಿ ವಿವಾದ ಬಗೆಹರಿಯುವ ತನಕ ಹೋರಾಟವನ್ನು ಕೈಬಿಡುವುದಿಲ್ಲ ಎಂದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಗೆ ಮಹಾರಾಷ್ಟ್ರ ಸಚಿವರು ಮತ್ತು ಶಾಸಕರು ಬರುವುದನ್ನು ನಾವೇ ತಡೆಯುತ್ತೇವೆ ಎಂದು ಕರವೇ ಕಾರ್ಯಕರ್ತರು ಪಣ ತೊಟ್ಟಿದ್ದಾರೆ.

ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಹೋರಾಟ ಜೋರಾಗಿದೆ. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು, ವಾಹನ ನಂಬರ್ ಪ್ಲೇಟ್ ಗಳನ್ನು ಕಿತ್ತು ಬಿಸಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜೀವ ಬಿಡುತ್ತೇವೆ ವಿನಃ ಬೆಳಗಾವಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಗಡಿವಿವಾದ ಜೋರಾಗುತ್ತಿರುವ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಈ ಗಡಿವಿವಾದಕ್ಕೆ ಅಷ್ಟೊಂದು ಮಹತ್ವ ಕೊಡುವುದು ಬೇಡ ಎಂದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಹೊಸ ಸಿಎಂ ಬಂದ ಬಳಿಕ ಈ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಈ ರೀತಿಯ ವಿವಾದವನ್ನು ಎಬ್ಬಿಸುವ ಕೆಲಸ ಮೊದಲಿನಿಂದಾನು ನಡೆಯುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!