ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಳ್ಳಾರಿ: ಜಿಲ್ಲಾಸ್ಪತ್ರೆಯ ವೈದ್ಯ ಡಾ.ಸುನೀಲ್ ಕಿಡ್ನ್ಯಾಪ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಒಂದು ಸಿಕ್ಕಿದೆ. ಜನವರಿ 25 ರಂದು ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಕಾಂಗ್ರೆಸ್ ಮುಖಂಡನನ್ನ ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ರನ್ನ ಬಂಧಿಸಿದ್ದಾರೆ.
ಡಾ. ಸುನೀಲ್ ಅವರನ್ನ ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಮಾಡಲಾಗಿತ್ತು. ಇದರ ತನಿಖೆಯನ್ನು ಶುರು ಮಾಡಿದ ಪೊಲೀಸರಿಗೆ ಅಪಹರಣದ ಹಿಂದಿನ ಕಿಂಗ್ ಪಿನ್ ವಿಜಯ್ ಕುಮಾರ್ ಎಂಬುದು ತಿಳಿದು ಬಂದಿದೆ. ಹೀಗಾಗಿ ಆತನನ್ನು ಅರೆಸ್ಟ್ ಮಾಡಿ, ಜೈಲಿಗೆ ಕಳುಹಿಸಿದ್ದಾರೆ. ಹಣದ ಆಸೆಗೆ ಈ ಕೃತ್ಯ ಮಾಡಲಾಗಿದೆ ಎನ್ನಲಾಗಿದೆ. ಒಟ್ಟು ಏಳು ಆರೋಪಿಗಳನ್ನ ಬಂಧಿಸಲಾಗಿದೆ. ಬಳಿಕ ಎ1 ಆರೋಪಿ ವಿಜಯ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಕಿಡ್ನ್ಯಾಪ್ ಮಾಡಿದ 4 ದಿನಗಳ ಬಳಿಕ ಪೊಲೀಸರ ಕೈಗೆ ವಿಜಯ್ ಕುಮಾರ್ ತಗಲಾಕಿಕೊಂಡಿದ್ದಾರೆ. ಸದ್ಯ ಪೊಲೀಸರು ಅರೆಸ್ಟ್ ಮಾಡಿ, ಜೈಲಿಗೆ ಹಾಕಿದ್ದಾರೆ.
ವಿಜಯ್ ಕುಮಾರ್ ಬಳ್ಳಾರಿ ನಗರಸಭೆಯ ಮಾಜಿ ಉಪಾಧ್ಯಕ್ಷರ ಮಗ ಆಗಿದ್ದಾರೆ. ಅಷ್ಟೇ ಅಲ್ಲ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ಅತ್ಯಾಪ್ತರು ಆಗಿದ್ದರು. ಹೀಗಾಗಿ ಕಾಂಗ್ರೆಸ್ ಪ್ರಭಾವಿ ನಾಯಕರ ಮನೆಯಲ್ಲಿ ಆಶ್ರಯ ಪಡೆದಿದ್ದರು ಎಂಬ ಆರೋಪವಿದೆ. ಪಕ್ಷದ ಮುಖಂಡ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಆರೋಪಿ ರಕ್ಷಣೆಗೆ ನಿಂತಿದ್ದರು ಎನ್ನಲಾಗುತ್ತಿದೆ. ಹೀಗಾಗಿಯೇ ಪೊಲೀಸರ ಕೈಗೆ ವಿಜಯ್ ಕುಮಾರ್ ಸುಲಭಕ್ಕೆ ಸಿಕ್ಕಿರಲಿಲ್ಲ. ಹಣದ ಆಸೆಗೆ ಬಿದ್ದು ಸಂಚು ರೂಪಿಸಿ, ಕಿಡ್ನ್ಯಾಪ್ ಮಾಡಲಾಗಿತ್ತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್