ಬಳ್ಳಾರಿ.ಜುಲೈ.31: ಕೌಟುಂಬಿಕ ಜಗಳ ವಿಕೋಪಕ್ಕೆ ಹೋಗಿ, ತನ್ನ ಏಳು ತಿಂಗಳ ಮಗು ಹಾಗೂ ಪತ್ನಿಯನ್ನು ಪತಿಯೊಬ್ಬ ಸುತ್ತಿಗೆಯಿಂದ ಹೊಡೆದು ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ.
ಅಂದ್ರಾಳ್ನಲ್ಲಿ ವಾಸವಾಗಿದ್ದ ಹೊನ್ನೂರಸ್ವಾಮಿ ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಆರೋಪಿ. ಈತನ ಪತ್ನಿ ರಾಜೇಶ್ವರಿ ಹಾಗೂ ಏಳು ತಿಂಗಳ ಹೆಣ್ಣು ಮಗು ಅಶ್ವಿನಿ ಕೊಲೆಯಾದ ದುರ್ದೈವಿಗಳು.
ದಂಪತಿ ನಡುವೆ ಇದ್ದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಾಗ ಆಕ್ರೋಶಗೊಂಡ ಹೊನ್ನೂರಸ್ವಾಮಿ, ಮನೆಯಲ್ಲಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಪತ್ನಿ ಮತ್ತು ಮಗುವಿನ ತಲೆಗೆ ಬಲವಾಗಿ ಬೀಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ತಾಯಿ-ಮಗು ಇಬ್ಬರೂ ತೀವ್ರ ರಕ್ತಸ್ರಾವದಿಂದಾಗಿ ಘಟನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ದುಷ್ಕೃತ್ಯ ಎಸಗಿದ ತಕ್ಷಣವೇ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಳ್ಳಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









