Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅವರ ಮತ್ತೊಂದು ಆಸೆ ಈಡೇರಿಸಿದ ಬಳ್ಳಾರಿ ಜೈಲು ಅಧಿಕಾರಿಗಳು..!

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಮಾಡಿ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಗೆ ಅಲ್ಲಿ ಯಾರೂ ಸಹಪಾಠಿಗಳಿಲ್ಲ. ಈಗ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಆಗಾಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಭೇಟಿ ನೀಡಿ ಒಂದಷ್ಟು ವಿಚಾರಗಳನ್ನ ಹೇಳುತ್ತಾ ಇರುತ್ತಾರೆ. ಇದೀಗ ರಾಜ್ಯದಲ್ಲಿ ಏನಾಗ್ತಿದೆ, ತನ್ನ ಕೇಸಲ್ಲಿ ಏನೆಲ್ಲಾ ಡೆವಲಪ್ಮೆಂಟ್ ಆಗ್ತಾ ಇದೆ ಎಂಬುದನ್ನು ದರ್ಶನ್ ಅವರೇ ಖುದ್ದಾಗಿ ತಿಳಿದುಕೊಳ್ಳಬಹುದು. ಬಳ್ಳಾರಿ ಜೈಲು ಅಧಿಕಾರಿಗಳು ಅಂಥದ್ದೊಂದು ಅವಕಾಶ ಒದಗಿಸಿಕೊಟ್ಟಿದ್ದಾರೆ.

ಜೈಲಿನಲ್ಲಿ ಈಗ ದರ್ಶನ್ ಇರುವ ರೂಮಿಗೆ ಟಿವಿ ಫಿಕ್ಸ್ ಮಾಡಲಾಗಿದೆ. ಕೈದಿಗಳಿಗೆ ಟಿವಿ ನೀಡುವ ಅವಕಾಶ ಜೈಲಿನಲ್ಲಿ ಇದೆ. ಇಷ್ಟು ದಿನ ಆ ಟಿವಿ ಹಾಳಾಗಿತ್ತು. ದರ್ಶನ್ ಕೂಡ ಕೊಲೆ ಕೇಸಲ್ಲಿ ಏನಾಗ್ತಿದೆ ಎಂಬುದನ್ನು ನೋಡಬೇಕಿತ್ತು. ಹೀಗಾಗಿ ಮನವಿಯನ್ನು ಮಾಡಿದ್ದರು. ಆ ಮನವಿಯನ್ನು ಸ್ಚೀಕರಿಸಿದ ಬಳ್ಳಾರಿ ಜೈಲು ಅಧಿಕಾರಿಗಳು ಟಿವಿಯನ್ನು ನೀಡಿದ್ದಾರೆ.

ದರ್ಶನ ಇರುವ ಸೆಲ್ ಗೆ ಹೈಯರ್‌ ಕಂಪನಿಯ ಟಿವಿ ಅಳವಡಿಸಿದ್ದಾರೆ. ಈ ಹಿಂದೆ ಟಿವಿ ಬೇಡವೆಂದು ಹೇಳಿದ್ದ ದರ್ಶನ್, ಕೇಸ್ ಸ್ಟ್ರಾಂಗ್ ಆಗುತ್ತಾ ಹೋಗುತ್ತಿರುವ ಕಾರಣ, ತನ್ನ ವಿಚಾರ ತಿಳಿದುಕೊಳ್ಳುವುದಕ್ಕೆ ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಬಳ್ಳಾರಿ ಜೈಲಿಗೆ ಹೋದ ಮೇಲೆ ಟಾಯ್ಲೆಟ್ ಚೇರ್ ಬೇಕು ಎಂದು ಕೇಳಿದ್ದರು ಅದನ್ನು ನೀಡಲಾಗಿದೆ. ಈಗ ಟಿವಿ ಕೂಡ ನೀಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ತನಗೆ ಬೇಕಾದ್ದನ್ನು ರೌಡಿಶೀಟರ್ ಗಳ ಸ್ನೇಹದಿಂದ ಸುಲಭವಾಗಿ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿ ಅವರುಗೆ ಯಾರು ಪರಿಚಯದವರೇ ಇಲ್ಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!