Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಟ್ಟುಸಿರು ಬಿಟ್ಟ ಬಳ್ಳಾರಿ ಜೀನ್ಸ್ ಫ್ಯಾಕ್ಟರಿ ಮಾಲೀಕರು : ಸಿದ್ದರಾಮಯ್ಯ ಬೆಂಬಲ

---Advertisement---

ಬೆಂಗಳೂರು: ಬಳ್ಳಾರಿ ಜೀನ್ಸ್ ಫ್ಯಾಕ್ಟರಿ ಮಾಲೀಕರ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ. ಅವರ ಮನವಿಯನ್ನ ಪುರಸ್ಕರಿಸಿದ್ದು, ಫ್ಯಾಕ್ಟರಿಗಳ ಓಪನ್ ಗೆ ಅನುಮತಿ ನೀಡಿದ್ದಾರೆ. ಸಿಎಂ ಸಭೆ ಸಫಲವಾಗಿದೆ. ಈ ಮೂಲಕ ಬಳ್ಳಾರಿ ಜೀನ್ಸ್ ಮಾಲೀಕರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

ಬಂದ್ ಆಗಿದ್ದಂತ 36 ಕಾರ್ಖಾನೆಗಳ ಆರಂಭಕ್ಕೆ ಆದೇಶವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ಸಭೆ ಮಾಡಿದ್ದು, ಇಂದು ಕಾರ್ಖಾನೆಗಳ ಕೆಲಸಕ್ಕೆ ಓಕೆ ಎಂದಿದ್ದಾರೆ. ಜೀನ್ಸ್ ಫ್ಯಾಕ್ಟರಿ ಕಾರ್ಖಾನೆಗಳ ಮಾಲೀಕರ ಜೊತೆಗೆ ಈ ಸಭೆ ನಡೆದಿತ್ತು. CETP ಪ್ಲಾಂಟ್ ಇರುವ ಫ್ಯಾಕ್ಟರಿಗಳಿಗೆ ತಕ್ಷಣಕ್ಕೆ ಅನುಮತಿಯನ್ನ ಕೊಡಲಾಗಿದೆ. ಕಾರ್ಖಾನೆ ಆರಂಭಕ್ಕೆ ಅನುಮತಿ ನೀಡುವಂತೆ ಪರಿಸರ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆಯನ್ನ ನೀಡಿದ್ದಾರೆ. ಪ್ಲಾಂಟ್ ಹಾಕಲು ಸರ್ಕಾರದಿಂದ 22 ಕೋಟಿಯನ್ನು ಮಂಜೂರು ಮಾಡಲಾಗಿದೆ.

ಇದರಲ್ಲಿ KIADB ಯಿಂದ 11 ಕೋಟಿ, KKRDB ಯಿಂದ 11 ಕೋಟಿಯನ್ನು ನೀಡಲಾಗುತ್ತಿದೆ. ಸರ್ಕಾರದ ಈ ನಿರ್ಧಾರದಿಂದ ಜೀನ್ಸ್ ಕಾರ್ಖಾನೆ ಮಾಲೀಕರು ಸಂತಸ ವ್ಯಕ್ತಪಡಿಸಿದ್ದಾರೆ. CETP ಪ್ಲಾಂಟ್ ಇರುವ ಕಾರ್ಖಾನೆಗಳು ಎಂದಿನಂತೆ ಕೆಲಸವನ್ನು ನಿರ್ವಹಿಸಲಿವೆ. ರಾಹುಲ್ ಗಾಂಧಿ ನೀಡಿದ ಭರವಸೆಯಿಂದ ಜೀನ್ಸ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಅದಕ್ಕಾಗಿ ಈಗಾಗಲೇ ಭೂಸ್ವಾಧೀನ ಕೂಡ ಪೂರ್ಣವಾಗಿದೆ. ಬಳ್ಳಾರಿಗೆ ಕರೆಸಿ ರಾಹುಲ್ ಗಾಂಧಿ ಅವರನ್ನು ಕರೆಸಿ ಉದ್ಘಾಟನೆ ಮಾಡುವುದಕ್ಕೆ ತಯಾರಿ ನಡೆದಿದೆ. ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜೀನ್ಸ್ ಕ್ಯಾಪಿಟಲ್ ಮಾಡ್ತೀವಿ ಎಂಬ ಮಾತನ್ನ ನೀಡಿದ್ದರು. ಸರ್ಕಾರ ಬಂದು ಎರಡೂವರೆ ವರ್ಷವಾದರೂ ಆ ಯೋಜನೆ ಏನಾಯ್ತು ಎಂಬ ಪ್ರಶ್ನೆಯ ನಡುವೆ ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now