Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ತೆಕ್ಕೆಗೆ ಬಳ್ಳಾರಿ ಮಹಾನಗರ ಪಾಲಿಕೆ..!

Facebook
Twitter
Telegram
WhatsApp

ಬಳ್ಳಾರಿ: ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 23ನೇ ಮೇಯರ್ ಆಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಲ್ಲಂಗಿ ನಂದೀಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮುಲ್ಲಂಗಿ ನಂದೀಶ್ ಸಚಿವ ಬಿ.ನಾಗೇಂದ್ರ ಅವರುಗೆ ಆಪ್ತರಾಗಿದ್ದರು. ಜೊತೆಗೆ 18ನೇ ವಾರ್ಡಿನ ಸದಸ್ಯರಾಗಿದ್ದರು. ಸದ್ಯ 23ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

 

ಬಿಜೆಪಿಯಿಂದ ಶ್ರೀನಿವಾಸ್ ಮೋತ್ಕರ್ ಸ್ಪರ್ಧೆಯಲ್ಲಿದ್ದರು. ಆದರೆ 21 ಸ್ಥಾನ ಗೆದ್ದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಸಚಿವ ಬಿ.ನಾಗೇಂದ್ರ ಅವರು ಮೇಲುಗೈ ಸಾಧಿಸಿದ್ದಾರೆ. ಉಪಮೇಯರ್ ಆಗಿ ಡಿ.ಸುಕುಂ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಕಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಾಲಿಕೆಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿತ್ತು. ಒಟ್ಟು 39 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 ಸ್ಥಾನ ಗೆದ್ದಿತ್ತು. ಇದರ ಜೊತೆಗೆ ಪಕ್ಷೇತರರಾಗಿ ಗೆದ್ದಿದ್ದ ಐವರು ಸದಸ್ಯರು ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಕಾಂಗ್ರೆಸ್ 26 ಸ್ಥಾನಗಳನ್ನು ಹೊಂದಿದಂತೆ ಆಗಿದೆ.

.ಮೇಯರ್ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ ನೀಡಬೇಕೆಂದು ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಭರತ್ ರೆಡ್ಡಿ ನಡುವೆ ಪೈಪೋಟಿ ನಡೆದಿತ್ತು. ಬಳಿಕ ಹೈಕಮಾಂಡ್ ಮಧ್ಯಸ್ಥಿಕೆಯಿಂದಾಗಿ ನಂದೀಶ್ ಅವರಿಗೆ ಟಿಕೆಟ್ ಸಿಕ್ಕಿದೆ. ಬಿ.ನಾಗೇಂದ್ರ ಅವರ ಆಪ್ತರಿಗೆ ಟಿಕೆಟ್ ಕೊಡಿಸಿದ್ದು ಅಲ್ಲದೆ, ಅವರೇ ಗೆಲ್ಲುವಂತೆ ನೋಡಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಬಹುಮತ ಹೊಂದಿದ್ದ ಕಾರಣ ನಾಲ್ವರು ಮೇಯರ್ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಎಲ್ಲರೂ ಯೋಚಿಸಿ, ಮುಲ್ಲಂಗಿ‌ನಂದೀಶ್ ಅವರನ್ನೇ ಮೇಯರ್ ಆಗಿ ಆಯ್ಕೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Hypertension : ಇವುಗಳನ್ನು ತಿಂದರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ…!

ಸುದ್ದಿಒನ್ : ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ಪ್ರತಿದಿನ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಸಮಸ್ಯೆ ಏನೆಂದರೆ, ಅಧಿಕ ರಕ್ತದೊತ್ತಡವು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಇದು ದೇಹದ ಯಾವುದೇ ಭಾಗದ ಮೇಲೆ ಯಾವಾಗ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ಬುಧವಾರ ರಾಶಿ ಭವಿಷ್ಯ -ಜುಲೈ-3,2024 ಸೂರ್ಯೋದಯ: 05:50, ಸೂರ್ಯಾಸ್ತ

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

error: Content is protected !!