Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ತೆಕ್ಕೆಗೆ ಬಳ್ಳಾರಿ ಮಹಾನಗರ ಪಾಲಿಕೆ..!

Facebook
Twitter
Telegram
WhatsApp

ಬಳ್ಳಾರಿ: ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 23ನೇ ಮೇಯರ್ ಆಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಲ್ಲಂಗಿ ನಂದೀಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮುಲ್ಲಂಗಿ ನಂದೀಶ್ ಸಚಿವ ಬಿ.ನಾಗೇಂದ್ರ ಅವರುಗೆ ಆಪ್ತರಾಗಿದ್ದರು. ಜೊತೆಗೆ 18ನೇ ವಾರ್ಡಿನ ಸದಸ್ಯರಾಗಿದ್ದರು. ಸದ್ಯ 23ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

 

ಬಿಜೆಪಿಯಿಂದ ಶ್ರೀನಿವಾಸ್ ಮೋತ್ಕರ್ ಸ್ಪರ್ಧೆಯಲ್ಲಿದ್ದರು. ಆದರೆ 21 ಸ್ಥಾನ ಗೆದ್ದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಸಚಿವ ಬಿ.ನಾಗೇಂದ್ರ ಅವರು ಮೇಲುಗೈ ಸಾಧಿಸಿದ್ದಾರೆ. ಉಪಮೇಯರ್ ಆಗಿ ಡಿ.ಸುಕುಂ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಕಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಾಲಿಕೆಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿತ್ತು. ಒಟ್ಟು 39 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 ಸ್ಥಾನ ಗೆದ್ದಿತ್ತು. ಇದರ ಜೊತೆಗೆ ಪಕ್ಷೇತರರಾಗಿ ಗೆದ್ದಿದ್ದ ಐವರು ಸದಸ್ಯರು ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಕಾಂಗ್ರೆಸ್ 26 ಸ್ಥಾನಗಳನ್ನು ಹೊಂದಿದಂತೆ ಆಗಿದೆ.

.ಮೇಯರ್ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ ನೀಡಬೇಕೆಂದು ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಭರತ್ ರೆಡ್ಡಿ ನಡುವೆ ಪೈಪೋಟಿ ನಡೆದಿತ್ತು. ಬಳಿಕ ಹೈಕಮಾಂಡ್ ಮಧ್ಯಸ್ಥಿಕೆಯಿಂದಾಗಿ ನಂದೀಶ್ ಅವರಿಗೆ ಟಿಕೆಟ್ ಸಿಕ್ಕಿದೆ. ಬಿ.ನಾಗೇಂದ್ರ ಅವರ ಆಪ್ತರಿಗೆ ಟಿಕೆಟ್ ಕೊಡಿಸಿದ್ದು ಅಲ್ಲದೆ, ಅವರೇ ಗೆಲ್ಲುವಂತೆ ನೋಡಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಬಹುಮತ ಹೊಂದಿದ್ದ ಕಾರಣ ನಾಲ್ವರು ಮೇಯರ್ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಎಲ್ಲರೂ ಯೋಚಿಸಿ, ಮುಲ್ಲಂಗಿ‌ನಂದೀಶ್ ಅವರನ್ನೇ ಮೇಯರ್ ಆಗಿ ಆಯ್ಕೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!