ಬಳ್ಳಾರಿ: ನಿನ್ನೆಯೆಲ್ಲಾ ಇಡೀ ಬಳ್ಳಾರಿ ಆತಂಕದಲ್ಲಿತ್ತು. ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಒಬ್ಬನ ಪ್ರಾಣವೇ ಹೋಗಿತ್ತು. ಈ ಘಟನೆ ಹಿನ್ನೆಲೆ ಇಂದು ನಡೆಯಬೇಕಿದ್ದ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.
ನಾನು ಬಳ್ಳಾರಿಯ ಎಸ್ಪಿಯನ್ನ ಸಸ್ಪೆಂಡ್ ಮಾಡಿದ್ದೇನೆ. ಬಿಜೆಪಿ ನಾಯಕರ ಮಾತಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಎಸ್ಪಿಯನ್ನ ಅಮಾನತು ಮಾಡಿರೋದ್ಯಾಕೆ ಅಂದ್ರೆ ಅಂಥ ಪರಿಸ್ಥಿತಿಯಲ್ಲಿ ಆ ಜಾಗದಲ್ಲಿ ಇರಲಿಲ್ಲ ಎಂದಿದ್ದಾರೆ.
ಬಳ್ಳಾರಿಯ ಎಸ್ಪಿ ಪವನ್ ನೆಜ್ಜೂರು ಸೇವೆಯಿಂದ ಅಮಾನತುಗೊಂಡಿದ್ದಾರೆ. ದುರಂತ ಏನಂದ್ರೆ ನಿನ್ನೆ ಬೆಳಗ್ಗೆಯಷ್ಟೇ ಪವನ್, ಬಳ್ಳಾರಿಯ ಎಸ್ಪಿಯಾಗಿ ಚಾರ್ಜ್ ತೆಗೆದುಕೊಂಡಿದ್ದರು. ಇಂದು ಅವರನ್ನ ಸರ್ಕಾರ ಅಮಾನತು ಮಾಡಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಯನ್ನು ನಿಯಂತ್ರಿಸಲು ವಿಫಲವಾದ ಹಿನ್ನಲೆ ಎಸ್ಪಿಯನ್ನು ಅಮಾನತು ಮಾಡಲಾಗಿದೆ.
ಬಳ್ಳಾರಿಯಲ್ಲಿ ನಿನ್ನೆ ಬೆಳಗ್ಗೆವರೆಗೂ ಶೋಭಾರಾಣಿ ಎಸ್ಪಿಯಾಗಿದ್ದರು. ಶೋಭಾರಾಣಿ ಅವರನ್ನು ಸರ್ಕಾರ ಡಿಸೆಂಬರ್ 31ರ ರಾತ್ರಿ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಪವನ್ ನೆಜ್ಜೂರು ಅವರನ್ನು ನೇಮಕ ಮಾಡಿತ್ತು. ಜನವರಿ 1ರ ಬೆಳಗ್ಗೆ ಅಧಿಕಾರ ವಹಿಸಿಕೊಂಡಿದ್ದರು. ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟಲು ಹೋದಂತ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವನ್ನಪ್ಪಿದ್ದರು. ಈ ಕಾರಣದಿಂದ ಬಳ್ಳಾರಿ ಗಲಾಟೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ವಿಫಲವಾಗಿದ್ದು ಜೊತೆಗೆ ಹಿರಿಯ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ನೀಡಿಲ್ಲ ಎಂಬ ಕಾರಣದಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ವಿರುದ್ಧ ಕ್ರಮಕ್ಕೆ ಬಳ್ಳಾರಿ ಡಿಐಜಿ ಶಿಫಾರಸು ಮಾಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












