ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ಸಂಬಂಧ ಬ್ಯಾನರ್ ಕಟ್ಟುವಂತಹ ವಿಚಾರದಲ್ಲಿ ಒಂದು ಹೆಣವೇ ಬಿದ್ದಿದೆ. ಹೀಗಾಗಿ ಬಳ್ಳಾರಿಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಇದರ ನಡುವೆ ಪರಿಸ್ಥಿತಿಯನ್ನ ಸರಿಯಾಗಿ ನಿಭಾಯಿಸದ ಕಾರಣ ಹಾಗೂ ಹಿರಿಯ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ನೀಡದೆ ಇರುವ ಕಾರಣಕ್ಕೆ ಕೇವಲ ಒಂದೇ ಒಂದು ದಿನದ ಹಿಂದಷ್ಟೇ ಬಳ್ಳಾರಿಗೆ ವರ್ಗಾವಣೆಯಾಗಿದ್ದ ಪವನ್ ನೆಜ್ಜೂರು ತೆಲದಂಡವಾಗಿತ್ತು. ಈ ಬೆನ್ನಲ್ಲೇ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗ್ತಾ ಇದೆ.
ಪವನ್ ತುಮಕೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಾತ್ರೆಗಳನ್ನ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡ್ತಾ ಇದೆ. ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆಗಳನ್ನ ಸೇವಿಸಿದ್ದರು ಎನ್ನಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗ್ತಾ ಇದೆ. ಆದರೆ ಈ ಸಂಬಂಧ ಅಧಿಕೃತವಾದಂತ ಮಾಹಿತಿ ಸಿಕ್ಕಿಲ್ಲ.
ಅವರ ಆತ್ಮಹತ್ಯೆ ವಿಚಾರವಾಗಲಿ ಅಥವಾ ಅಮಾನತು ಮಾಡಿಕೊಂಡ ವಿಚಾರಕ್ಕಾಗಲೀ ಯಾವ ವಿಚಾರಕ್ಕೆ ಈ ಘಟನೆ ನಡೆದಿದೆ ಎಂಬುದು ಇನ್ನು ಅಧಿಕೃತವಾದ ಯಾವುದೇ ಮಾಹಿತಿ ಸಿಕ್ಕಿಲ್ಲ. ಆತ್ಮಹತ್ಯೆಗೆ ಯತ್ನವನ್ನ ಮಾಡಿದ್ದಾರೆ ಎಂಬುದು ಅವರ ಸ್ನೇಹಿತರ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಧಿಕಾರ ತೆಗೆದುಕೊಳ್ಳುವುದಕ್ಕೂ ಮುನ್ನ ಕನಕದುರ್ಗ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನ ಸಲ್ಲಿಸಿ, ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ಅವರು ಅಧಿಕಾರ ಸ್ವೀಕಾರ ಮಾಡಿದ ಕೆಲವೇ ಗಂಟೆಗಳಲ್ಲಿ ಬಳ್ಳಾರಿ ಘಟನೆ ನಡೆದಿತ್ತು. ಬಳ್ಳಾರಿಗೆ ಬರುವುದಕ್ಕೂ ಮೊದಲು 11 ವರ್ಷಗಳಿಂದ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದವರು. 11 ವರ್ಷಗಳ ಬಳಿಕ ಎಸ್ಪಿಯಾಗಿದ್ದರು. ಯೂನಿಫಾರ್ಮ್ ಧರಿಸಿದ್ದರು. ಇಂತಹ ಸಂದರ್ಭದಲ್ಲಿ ಈ ರೀತಿ ಘಟನೆ ನಡೆದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್