Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು – ಧಾರವಾಡ ವಂದೇ ಭಾರತ್ ಟ್ರೈನ್ ಗೆ ಇಂದು ಪ್ರಧಾನಿ ಚಾಲನೆ : ಯಾವಾಗಿಂದ ಸಂಚರಿಸಬಹುದು ಎಂಬ ಮಾಹಿತಿ ಇಲ್ಲಿದೆ

---Advertisement---

ನವದೆಹಲಿ: ಬೆಂಗಳೂರಿನಿಂದ ಧಾರವಾಡಕ್ಕೆ ವಂದೇ ಭಾರತ್ ಟ್ರೈನ್ ಅನ್ನು ಇಂದಿನಿಂದ ಬಿಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ವಂದೇ ಭಾರತ್ ಟ್ರೈನ್ ಗೆ ಭೋಪಾಲ್ ನ ರಾಣಿ ಕಮಲಪಾಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯಕ್ಕೆ ಎರಡನೇ ಐಷರಾಮಿ ರೈಲು ಬಿಡುಗಡೆ ಮಾಡಿದಂತೆ ಆಗುತ್ತದೆ. ಈಗಾಗಲೇ ಬೆಂಗಳೂರು ಟು ಮೈಸೂರು ವಂದೇ ಭಾರತ್ ರೈಲು ಸಂಚಾರ ಮಾಡುತ್ತಿದೆ.

ಇಂದು ಬೆಳಗ್ಗೆ 10.30ಕ್ಕೆ ಟ್ರೈನ್ ಸಂಚಾರಕ್ಕೆ ಚಾಲನೆ ಸಿಗಲಿದೆ. ವಂದೇ ಭಾರತ್ ಟ್ರೈನ್ ಬೆಂಗಳೂರು – ಧಾರವಾಡ, ಗೋವಾ – ಮುಂಬೈ, ಇಂಧೋರ್ – ಭೋಪಾಲ್ ನಡುವೆ ಸಂಚಾರ ನಡೆಸಲಿದೆ. ಪ್ರಧಾನಿ ಮೋದಿ ಅವರು ಇಂದಿನಿಂದ ಚಾಲನೆ ನೀಡಲಿದ್ದಾರೆ.

ಇನ್ನು ಸಾರ್ವಜನಿಕ ಸಂಚಾರಕ್ಕೆ ವಂದೇ ಭಾರತ್ ಬೆಂಗಳೂರು ಟು ಧಾರವಾಡ ನಾಳೆಯಿಂದ ಅವಕಾಶ ಸಿಗಲಿದೆ. ಈ ಟ್ರೈನು ಬೆಂಗಳೂರಿನಿಂದ ಬೆಳಗ್ಗೆ 5.57ಕ್ಕೆ ಹೊರಟೆರೆ ಮಧ್ಯಾಹ್ನ 12.10ಕ್ಕೆ ಧಾರವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಮತ್ತೆ ಧಾರವಾಡ ಬಿಡಲಿದೆ. ಸಂಜೆ 7 ಗಂಟೆಗೆಲ್ಲಾ ಬೆಂಗಳೂರಿಗೆ ಬಂದು ತಲುಪಲಿದೆ. ದಿನವಿಡೀ ಸಂಚಾರ ಮಾಡಬೇಕಲ್ಲ ಎಂಬುವವರಿಗೆ ವಂದೇ ಭಾರತ್ ತುಂಬಾ ಅನುಕೂಲಕರವಾಗಲಿದೆ. ಆದರೆ ಟಿಕೆಟ್ ಚಾರ್ಜ್ ಕೇಳಿದ್ರೆ ಶಾಕ್ ಆಗ್ಬೇಕು.

AC ಚೇರ್​​ಕಾರ್​ನಲ್ಲಿ ಬೆಂಗಳೂರಿನಿಂದ ಧಾರವಾಡಕ್ಕೆ 1165 ರೂಪಾಯಿ. ಬೆಂಗಳೂರಿನಿಂದ ಧಾರವಾಡ (ಎಕ್ಸಿಕ್ಯೂಟಿವ್ ಕ್ಲಾಸ್​) 2245 ರೂಪಾಯಿ. ಧಾರವಾಡದಿಂದ ಬೆಂಗಳೂರು (AC ಚೇರ್​​ಕಾರ್) 1130 ರೂಪಾಯಿ.ಧಾರವಾಡದಿಂದ ಬೆಂಗಳೂರು (ಎಕ್ಸಿಕ್ಯೂಟಿವ್ ಕ್ಲಾಸ್​) 2240 ರೂಪಾಯಿ ಇರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...