Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಧಾರವಾಡ ವಂದೇ ಭಾರತ್ ಟ್ರೈನ್ ಗೆ ಇಂದು ಪ್ರಧಾನಿ ಚಾಲನೆ : ಯಾವಾಗಿಂದ ಸಂಚರಿಸಬಹುದು ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ನವದೆಹಲಿ: ಬೆಂಗಳೂರಿನಿಂದ ಧಾರವಾಡಕ್ಕೆ ವಂದೇ ಭಾರತ್ ಟ್ರೈನ್ ಅನ್ನು ಇಂದಿನಿಂದ ಬಿಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ವಂದೇ ಭಾರತ್ ಟ್ರೈನ್ ಗೆ ಭೋಪಾಲ್ ನ ರಾಣಿ ಕಮಲಪಾಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯಕ್ಕೆ ಎರಡನೇ ಐಷರಾಮಿ ರೈಲು ಬಿಡುಗಡೆ ಮಾಡಿದಂತೆ ಆಗುತ್ತದೆ. ಈಗಾಗಲೇ ಬೆಂಗಳೂರು ಟು ಮೈಸೂರು ವಂದೇ ಭಾರತ್ ರೈಲು ಸಂಚಾರ ಮಾಡುತ್ತಿದೆ.

ಇಂದು ಬೆಳಗ್ಗೆ 10.30ಕ್ಕೆ ಟ್ರೈನ್ ಸಂಚಾರಕ್ಕೆ ಚಾಲನೆ ಸಿಗಲಿದೆ. ವಂದೇ ಭಾರತ್ ಟ್ರೈನ್ ಬೆಂಗಳೂರು – ಧಾರವಾಡ, ಗೋವಾ – ಮುಂಬೈ, ಇಂಧೋರ್ – ಭೋಪಾಲ್ ನಡುವೆ ಸಂಚಾರ ನಡೆಸಲಿದೆ. ಪ್ರಧಾನಿ ಮೋದಿ ಅವರು ಇಂದಿನಿಂದ ಚಾಲನೆ ನೀಡಲಿದ್ದಾರೆ.

ಇನ್ನು ಸಾರ್ವಜನಿಕ ಸಂಚಾರಕ್ಕೆ ವಂದೇ ಭಾರತ್ ಬೆಂಗಳೂರು ಟು ಧಾರವಾಡ ನಾಳೆಯಿಂದ ಅವಕಾಶ ಸಿಗಲಿದೆ. ಈ ಟ್ರೈನು ಬೆಂಗಳೂರಿನಿಂದ ಬೆಳಗ್ಗೆ 5.57ಕ್ಕೆ ಹೊರಟೆರೆ ಮಧ್ಯಾಹ್ನ 12.10ಕ್ಕೆ ಧಾರವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಮತ್ತೆ ಧಾರವಾಡ ಬಿಡಲಿದೆ. ಸಂಜೆ 7 ಗಂಟೆಗೆಲ್ಲಾ ಬೆಂಗಳೂರಿಗೆ ಬಂದು ತಲುಪಲಿದೆ. ದಿನವಿಡೀ ಸಂಚಾರ ಮಾಡಬೇಕಲ್ಲ ಎಂಬುವವರಿಗೆ ವಂದೇ ಭಾರತ್ ತುಂಬಾ ಅನುಕೂಲಕರವಾಗಲಿದೆ. ಆದರೆ ಟಿಕೆಟ್ ಚಾರ್ಜ್ ಕೇಳಿದ್ರೆ ಶಾಕ್ ಆಗ್ಬೇಕು.

AC ಚೇರ್​​ಕಾರ್​ನಲ್ಲಿ ಬೆಂಗಳೂರಿನಿಂದ ಧಾರವಾಡಕ್ಕೆ 1165 ರೂಪಾಯಿ. ಬೆಂಗಳೂರಿನಿಂದ ಧಾರವಾಡ (ಎಕ್ಸಿಕ್ಯೂಟಿವ್ ಕ್ಲಾಸ್​) 2245 ರೂಪಾಯಿ. ಧಾರವಾಡದಿಂದ ಬೆಂಗಳೂರು (AC ಚೇರ್​​ಕಾರ್) 1130 ರೂಪಾಯಿ.ಧಾರವಾಡದಿಂದ ಬೆಂಗಳೂರು (ಎಕ್ಸಿಕ್ಯೂಟಿವ್ ಕ್ಲಾಸ್​) 2240 ರೂಪಾಯಿ ಇರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!