Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 11ಕ್ಕೆ ನೂತನ ಶಾಸಕರ ಪದಗ್ರಹಣ; ವಿಧಾನಸೌಧದಲ್ಲಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣ ವಚನ

---Advertisement---

ಸುದ್ದಿಒನ್,ಬೆಂಗಳೂರು,ಮೇ08:ಉಪಚುನಾವಣೆಯ ಅಖಾಡದಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕರು ಈಗ ಅಧಿಕೃತವಾಗಿ ಜನಪ್ರತಿನಿಧಿಗಳಾಗಿ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ವಿಜಯಶಾಲೀ ಅಭ್ಯರ್ಥಿಗಳಾದ ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ಬರುವ ಮೇ 11ರಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈಗಾಗಲೇ ವಿಧಾನಸಭಾ ಸಚಿವಾಲಯವು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲಾ ಅಧಿಕೃತ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಸಂವಿಧಾನಬದ್ಧವಾಗಿ ಶಾಸಕ ಹುದ್ದೆಯ ಜವಾಬ್ದಾರಿ ಸ್ವೀಕರಿಸಲಿರುವ ಈ ಉಭಯ ನಾಯಕರಿಗೆ ವಿಧಾನಸಭಾಧ್ಯಕ್ಷರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸರ್ಕಾರದ ಪ್ರಮುಖ ಸಚಿವರು, ಹಿರಿಯ ರಾಜಕೀಯ ಮುಖಂಡರು ಹಾಗೂ ನೂತನ ಶಾಸಕರ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

ಉಪಚುನಾವಣೆಯ ಫಲಿತಾಂಶ ಪ್ರಕಟವಾದ ದಿನದಿಂದಲೂ ಎರಡೂ ಕ್ಷೇತ್ರಗಳಲ್ಲಿ ವಿಜಯೋತ್ಸವ ಮುಗಿಲು ಮುಟ್ಟಿದೆ. ಮತದಾರರ ವಿಶ್ವಾಸ ಗೆದ್ದು ಶಾಸನಸಭೆ ಪ್ರವೇಶಿಸುತ್ತಿರುವ ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಅವರ ಮೇಲೆ ಈಗ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಹೆಚ್ಚಿನ ನಿರೀಕ್ಷೆಗಳಿವೆ. ಕ್ಷೇತ್ರದ ಸಮಸ್ಯೆಗಳಿಗೆ ಸದನದಲ್ಲಿ ಧ್ವನಿಯಾಗುವ ಹಾಗೂ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಈಗ ಈ ಇಬ್ಬರು ಯುವ ಮತ್ತು ಅನುಭವಿ ನಾಯಕರ ಹೆಗಲೇರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now