Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನ ಖಾಸಗಿ ಶಾಲೆಗೆ ಬೀಗ.. 140 ಮಕ್ಕಳ ಭವಿಷ್ಯ ಅತಂತ್ರ..!

Facebook
Twitter
Telegram
WhatsApp

 

 

ಬೆಂಗಳೂರು: ಶಾಲೆ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ಬುನಾದಿ. ಮಕ್ಕಳ ಆಟ‌ಪಾಠ ಎಲ್ಲವನ್ನು ಸರಿಯಾದ ಮಾರ್ಗದಲ್ಲಿ ಕಲಿಸಿಕೊಡುತ್ತದೆ ಶಾಲೆ. ಅಲ್ಲಿನ ಶಿಕ್ಷಕರು ಕೂಡ ಮಕ್ಕಳಿಗೆ ಎರಡನೇ ಪೋಷಕರು. ಗುರುವೆಂದರೆ ದೇವರಿಗೆ ಸಮಾನ. ಆದ್ರೆ ಆ ಗುರುಗಳೇ ಕಾಮುಕರಾದರೆ..? ಬೇಲಿಯೇ ಎದ್ದು ಜೊಲ ಮೇಯ್ದಂತೆಯೇ ಸರಿ. ಇಂಥ ಕ್ರೂರ ಕೃತ್ಯ ನಡೆದಿರೋದು ಬೆಂಗಳೂರಿನ ವರ್ತೂರಿನಲ್ಲಿರುವ ಖಾಸಗಿ ಶಾಲೆಯಲ್ಲಿ. 10 ವರ್ಷದ ಬಾಲಕಿ‌ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಬೀಗ ಹಾಕಲಾಗಿದೆ.

ಬಿಇಒ ಈ ಆದೇಶ ಹೊರಡಿಸಿದ್ದಾರೆ. ಶಾಲೆ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಅತ್ಯಾಚಾರದ ಆರೋಪಿ ಈ ಶಾಲೆಯನ್ನು ಕೋರಮಂಗಲದಲ್ಲಿ ತೆರೆಯಲು ಅನುಮತಿ‌ ಕೇಳಿದ್ದ. ಆದ್ರೆ ವರ್ತೂರಿನಲ್ಲಿ ಅನಧಿಕೃತವಾಗಿ ತೆರೆದಿದ್ದ. ಹೀಗಾಗಿ ಶಾಲೆಗೆ ಬೀಗ ಹಾಕಿಸಲಾಗಿದೆ.

ಆದ್ರೆ ಈ ಶಾಲೆಯಲ್ಲಿ ಸುಮಾರು 140ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಹೀಗಾಗಿ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ಈ ಮಧ್ಯೇ ಕ್ಷೇತ್ರ ಶಿಕ್ಷಣಾಧಿಕಾರಿಯೇ ಮಕ್ಕಳ ಭವಿಷ್ಯಕ್ಕೆ ಬೇರೆ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ಬೇರೆ ಶಾಲೆಯಲ್ಲಿ ಮಕ್ಕಳಿಗೆ ಅಡ್ಮಿಷನ್ ಕೊಡಿಸಲು ನಿರ್ಧಾರ ಮಾಡಿದ್ದಾರೆ. ಆದ್ರೆ ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಕಳೆದು ಆಗಿದೆ‌. ಈಗ ಬೇರೆ ಶಾಲೆಗೆ ಸೇರಿಸಿದರೆ ಮಕ್ಕಳ ಭವಿಷ್ಯ ಏನಾಗಲಿದೆ ಅನ್ನೋದು ಪೋಷಕರ ಆತಂಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!