Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂದಿ ಬೆಟ್ಟಕ್ಕೆ ಈಗ ಪ್ಲಾನ್ ಮಾಡಿಕೊಳ್ಳಿ : ಸಂಚಾರಕ್ಕೆ ಮುಕ್ತವಾಗಿದೆ ರಸ್ತೆ..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ವೀಕೆಂಡ್ ಫ್ಲ್ಯಾನ್ ನಲ್ಲಿ ನಂದಿ ಬೆಟ್ಟ ಕೂಡ ಒಂದು. ಬೆಂಗಳೂರು ಸುತ್ತಮುತ್ತಲಿನವರು ನಂದಿಬೆಟ್ಟಕ್ಕೇನೆ ಮೊದಲು ಫ್ಲ್ಯಾನ್ ಮಾಡೋದು. ಆದ್ರೆ ಪ್ರವಾಸಿಗರ ಭಾರೀ ಬೇಡಿಕೆ ಇರುವ ನಂದಿ ಬೆಟ್ಟಕ್ಕೆ ಕೆಲವು ತಿಂಗಳಿಂದ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಮುಕ್ತ ಅವಕಾಶ ಸಿಕ್ಕಿದ್ದು, ಮತ್ತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

ಆಗಸ್ಟ್ ತಿಂಗಳಲ್ಲಿ ಸುರಿದ ಬಾರೀ ಮಳೆಯಿಂದಾಗಿ ನಂದಿಬೆಟ್ಟದ ಬ್ರಹ್ಮಗಿರಿ ಬೆಟ್ಟದಲ್ಲಿ ಕುಸಿತ ಉಂಟಾಗಿತ್ತು. ಇದರ ಪರಿಣಾಮ ನಂದಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಹೀಗಾಗಿ ನಂದಿ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿತ್ತು. ಅದೆಷ್ಟೋ ಪ್ರವಾಸಿಗರು ಬೆಟ್ಟದವರೆಗೂ ಬಂದು ವಾಪಾಸ್ಸಾಗಿದ್ದರು. ಇದೀಗ ರಸ್ತೆಯೆಲ್ಲವೂ ಸರಿಯಾಗಿದ್ದು, ಒಂದು ವಾರದಲ್ಲೇ ನಂದಿ ಬೆಟ್ಟಕ್ಕೆ ಮತ್ತೆ ಸಾರ್ವಜನಿಕರ ಪ್ರವೇಶಕ್ಕೆ ದಾರಿ ಸಿಗಲಿದೆ.

ರಾಜ್ಯ ಸರ್ಕಾರ 80 ಲಕ್ಷ ರೂ. ವೆಚ್ಚ ಮಾಡಿ, ಕೊಚ್ಚಿ ಹೋದ ರಸ್ತೆಯ ಮರು ನಿರ್ಮಾಣ ಕಾರ್ಯ ಮಾಡಿದೆ. 40 ಮೀಟರ್ ಉದ್ದದ ರಸ್ತೆಗೆ, ಭದ್ರವಾದ ಸಿಮೆಂಟ್ ಕಾಂಕ್ರೀಟ್ ಸೇತುವೆ ನಿರ್ಮಾಣ ಮಾಡಲಾಗಿದ್ದು, ಬೆಟ್ಟದಿಂದ ಬರುವ ನೀರು ಸರಾಗವಾಗಿ ಹರಿದು ಹೋಗಲು ಬೃಹತ್ ಗಾತ್ರದ ಪೈಪ್​ಗಳನ್ನು ಅಳವಡಿಸಲಾಗಿದೆ. ಇನ್ನೇನು ಬಹುತೇಕ ರಸ್ತೆ ಕಾಮಗಾರಿ ಮುಗಿದಿದ್ದು, ತಡೆಗೋಡೆಗಳ ನಿರ್ಮಾಣ ಕಾರ್ಯ ಮಾತ್ರ ಬಾಕಿ ಇದೆ. ಎಲ್ಲಾ ಅಂದುಕೊಂಡಂತೆ ಆದರೆ, ಇನ್ನೊಂದು ವಾರದಲ್ಲಿ ರಸ್ತೆ ಉದ್ಘಾಟನೆ ಆಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!