Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಪ್ರಯೋಜನಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್

---Advertisement---

 

 

ಸುದ್ದಿಒನ್, ಚಿತ್ರದುರ್ಗ, (ಆ.23) : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಪ್ರಯೋಜನಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಪೂಜಿ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಸಮೂಹ ಸಂಸ್ಥೆಯಲ್ಲಿ ಬುಧವಾರ ನಡೆದ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕ್ರೀಡಾಕೂಟ ನಡೆಸಲಾಗುತ್ತಿದೆ. ಸರ್ಕಾರದಿಂದ ಕಡಿಮೆ ಅನುದಾನ ಬರುವುದರಿಂದ ಶಿಕ್ಷಣ ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರಬೇಕಾದರೆ ಕ್ರೀಡೆ ಸಹಕಾರಿ. ಮನಸ್ಸು ಮತ್ತು ದೇಹ ಲವಲವಿಕೆಯಿಂದಿರುತ್ತದೆ. ತೀರ್ಪುಗಾರರು ಪ್ರಾಮಾಣಿಕವಾಗಿ ತೀರ್ಪು ಕೊಡಬೇಕೆಂದು ಹೇಳಿದರು.

ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹ ಮನೋಭಾವನೆ ಮೂಡುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಉಲ್ಲಾಸದಿಂದಿರಬಹುದು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ಸೋಲನ್ನೆ ಗೆಲುವಿನ ಮೆಟ್ಟಿಲಾಗಿ ಮಾಡಿಕೊಂಡರೆ ಮುಂದೆ ಯಶಸ್ಸು ಕಾಣಬಹುದು ಎಂದರು.

ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ಎಂ.ಆರ್.ನಾಗರಾಜ್, ಮಹಾಂತೇಶ್, ಮಲ್ಲಿಕಾರ್ಜುನ್, ಕೆಂಚಪ್ಪ, ಎಂ.ಎಸ್.ಲತ, ಉಷ, ದೈಹಿಕ ಶಿಕ್ಷಕರು ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.
26 ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...